<p><strong>ನವದೆಹಲಿ</strong>: ಶರಾವತಿ ಕಣಿವೆಯ ಸಿಂಹದ ಬಾಲದ ಸಿಂಗಳೀಕ ಅಭಯಾರಣ್ಯದಲ್ಲಿ ಅನುಷ್ಠಾನಗೊಳ್ಳಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ತಾತ್ವಿಕ ಅನುಮೋದನೆ ನೀಡಿದೆ. 28 ಷರತ್ತುಗಳನ್ನು ಪಾಲಿಸಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದೆ. </p>.<p>ವಿದ್ಯುತ್ ಉತ್ಪಾದನೆಗೆ ಬಳಸಿದ ನೀರನ್ನು ಮತ್ತೆ ಮತ್ತೆ ಪಂಪ್ಗಳ ಮೂಲಕ ಹಿಂದಕ್ಕೆ ಕೊಂಡೊಯ್ದು, ತಲಾ 250 ಮೆಗಾವಾಟ್ ಸಾಮರ್ಥ್ಯದ ಎಂಟು ಜಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬಳಸುವ ₹9,000 ಸಾವಿರ ಕೋಟಿ ಮೊತ್ತದ ಯೋಜನೆ ಇದು. ಒಟ್ಟು 2,000 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗಿದೆ. ಡಿಪಿಆರ್ಗೆ ಕೇಂದ್ರ ವಿದ್ಯುತ್ ಪ್ರಾಧಿಕಾರವು 2024ರ ಆಗಸ್ಟ್ನಲ್ಲಿ ಅನುಮೋದನೆ ನೀಡಿತ್ತು. ಈ ಯೋಜನೆಗೆ 352.77 ಎಕರೆ ಜಮೀನು ಅಗತ್ಯವಿದೆ. ಅದರಲ್ಲಿ 133.81 ಎಕರೆ ಅರಣ್ಯ ಭೂಮಿಯಾಗಿದೆ.</p>.<p>ಕೇಂದ್ರ ಅರಣ್ಯ ಸಚಿವ ಭೂಪೆಂದರ್ ಯಾದವ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 84ನೇ ಸಭೆಯಲ್ಲಿ, ಈ ಯೋಜನೆಯಿಂದಾಗಿ ಸಿಂಹದ ಬಾಲದ ಸಿಂಗಳೀಕ ಸೇರಿದಂತೆ ವಿವಿಧ ವನ್ಯಜೀವಿಗಳ ಮೇಲೆ ಪರಾಮರ್ಶೆ ನಡೆಸಲಾಯಿತು. ಈ ಅಭಯಾರಣ್ಯದಲ್ಲಿ 700ಕ್ಕೂ ಹೆಚ್ಚು ಸಿಂಹದ ಬಾಲದ ಸಿಂಗಳೀಕಗಳಿವೆ. ಇಷ್ಟೊಂದು ಸಿಂಗಳೀಕಗಳು ಬೇರೆ ಯಾವುದೇ ಸಂರಕ್ಷಿತ ಪ್ರದೇಶದಲ್ಲಿ ಇಲ್ಲ ಎಂಬ ವರದಿಗಳನ್ನು ಮಂಡಳಿ ಗಮನಿಸಿತು. ಈ ಯೋಜನೆಗೆ ಒಪ್ಪಿಗೆ ನೀಡುವುದಕ್ಕೆ ಸಮಿತಿಯ ಸದಸ್ಯರಾದ ಡಾ. ಎಚ್.ಎಸ್.ಸಿಂಗ್ ಹಾಗೂ ಡಾ. ಆರ್.ಸುಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಯೋಜನೆಗೆ ಅರಣ್ಯ ಅನುಮೋದನೆ ಪಡೆದ ನಂತರ ಸ್ಥಾಯಿ ಸಮಿತಿಯ ಪರಿಗಣನೆಗೆ ಪ್ರಸ್ತಾವನೆಯನ್ನು ಮತ್ತೊಮ್ಮೆ ಮಂಡಿಸಬಹುದು ಎಂದು ಸಚಿವ ಯಾದವ್ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶರಾವತಿ ಕಣಿವೆಯ ಸಿಂಹದ ಬಾಲದ ಸಿಂಗಳೀಕ ಅಭಯಾರಣ್ಯದಲ್ಲಿ ಅನುಷ್ಠಾನಗೊಳ್ಳಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ತಾತ್ವಿಕ ಅನುಮೋದನೆ ನೀಡಿದೆ. 28 ಷರತ್ತುಗಳನ್ನು ಪಾಲಿಸಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದೆ. </p>.<p>ವಿದ್ಯುತ್ ಉತ್ಪಾದನೆಗೆ ಬಳಸಿದ ನೀರನ್ನು ಮತ್ತೆ ಮತ್ತೆ ಪಂಪ್ಗಳ ಮೂಲಕ ಹಿಂದಕ್ಕೆ ಕೊಂಡೊಯ್ದು, ತಲಾ 250 ಮೆಗಾವಾಟ್ ಸಾಮರ್ಥ್ಯದ ಎಂಟು ಜಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬಳಸುವ ₹9,000 ಸಾವಿರ ಕೋಟಿ ಮೊತ್ತದ ಯೋಜನೆ ಇದು. ಒಟ್ಟು 2,000 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗಿದೆ. ಡಿಪಿಆರ್ಗೆ ಕೇಂದ್ರ ವಿದ್ಯುತ್ ಪ್ರಾಧಿಕಾರವು 2024ರ ಆಗಸ್ಟ್ನಲ್ಲಿ ಅನುಮೋದನೆ ನೀಡಿತ್ತು. ಈ ಯೋಜನೆಗೆ 352.77 ಎಕರೆ ಜಮೀನು ಅಗತ್ಯವಿದೆ. ಅದರಲ್ಲಿ 133.81 ಎಕರೆ ಅರಣ್ಯ ಭೂಮಿಯಾಗಿದೆ.</p>.<p>ಕೇಂದ್ರ ಅರಣ್ಯ ಸಚಿವ ಭೂಪೆಂದರ್ ಯಾದವ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 84ನೇ ಸಭೆಯಲ್ಲಿ, ಈ ಯೋಜನೆಯಿಂದಾಗಿ ಸಿಂಹದ ಬಾಲದ ಸಿಂಗಳೀಕ ಸೇರಿದಂತೆ ವಿವಿಧ ವನ್ಯಜೀವಿಗಳ ಮೇಲೆ ಪರಾಮರ್ಶೆ ನಡೆಸಲಾಯಿತು. ಈ ಅಭಯಾರಣ್ಯದಲ್ಲಿ 700ಕ್ಕೂ ಹೆಚ್ಚು ಸಿಂಹದ ಬಾಲದ ಸಿಂಗಳೀಕಗಳಿವೆ. ಇಷ್ಟೊಂದು ಸಿಂಗಳೀಕಗಳು ಬೇರೆ ಯಾವುದೇ ಸಂರಕ್ಷಿತ ಪ್ರದೇಶದಲ್ಲಿ ಇಲ್ಲ ಎಂಬ ವರದಿಗಳನ್ನು ಮಂಡಳಿ ಗಮನಿಸಿತು. ಈ ಯೋಜನೆಗೆ ಒಪ್ಪಿಗೆ ನೀಡುವುದಕ್ಕೆ ಸಮಿತಿಯ ಸದಸ್ಯರಾದ ಡಾ. ಎಚ್.ಎಸ್.ಸಿಂಗ್ ಹಾಗೂ ಡಾ. ಆರ್.ಸುಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಯೋಜನೆಗೆ ಅರಣ್ಯ ಅನುಮೋದನೆ ಪಡೆದ ನಂತರ ಸ್ಥಾಯಿ ಸಮಿತಿಯ ಪರಿಗಣನೆಗೆ ಪ್ರಸ್ತಾವನೆಯನ್ನು ಮತ್ತೊಮ್ಮೆ ಮಂಡಿಸಬಹುದು ಎಂದು ಸಚಿವ ಯಾದವ್ ಸೂಚಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>