ಇಲ್ಲಿನ ರಾಘವೇಶ್ವರ ಭಾರತೀ ಸಭಾಭವನದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾ ಪೀಠದ ಮಾರ್ಗದರ್ಶನ ಸಭೆಯಲ್ಲಿ ಮಾತನಾಡಿದ ಅವರು, ‘ಶರಾವತಿ ಯೋಜನೆಗೆ ಶ್ರೀಮಠದ ವಿರೋಧವಿದೆ. ಸರ್ಕಾರ ಈ ದಿಕ್ಕಿನಲ್ಲಿ ಒಂದು ಹೆಜ್ಜೆ ಮುಂದಿಟ್ಟರೆ ಶ್ರೀ ಮಠದ ಕಾರ್ಯಕರ್ತರು ಅದನ್ನು ವಿರೋಧಿಸಲು ನೂರು ಹೆಜ್ಜೆ ಮುಂದಿಡುತ್ತಾರೆ’ ಎಂದು ಎಚ್ಚರಿಸಿದರು.