ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್. ವಿಶ್ವನಾಥ್, ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಲು ಕಾಂಗ್ರೆಸ್ಗೆ ಇಚ್ಛೆ ಇಲ್ಲದಿದ್ದರೆ ಬೆಂಬಲ ವಾಪಸ್ ಪಡೆಯಲಿ ಎಂದು ಹೇಳಿಕೆ ನೀಡಿದರೆ, ಎಚ್.ಡಿ.ದೇವೇಗೌಡರು, ಸರ್ಕಾರ ಯಾವಾಗ ಬಿದ್ದು ಹೋಗುತ್ತದೆಯೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಈ ರೀತಿಯ ಹೇಳಿಕೆ ನೀಡುವ ಬದಲು ಕಾಂಗ್ರೆಸ್ನೊಂದಿಗೆ ಮೈತ್ರಿ ಕಡಿದುಕೊಳ್ಳಲಿ. ಸರ್ಕಾರ ರಚನೆ ಮಾಡಲು ಬಿಜೆಪಿ ಎಲ್ಲ ರೀತಿಯಿಂದಲೂ ಸಿದ್ಧವಿದೆ’ ಎಂದರು.