<p>ಶಿಕಾರಿಪುರ: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಂತ್ರಿ ಸ್ಥಾನ ಸಿಗಲಿ ಎಂಬ ಆಶಯದಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮನೆದೇವರಾದ ಪಟ್ಟಣದ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.</p>.<p>‘ಮೂರುಬಾರಿ ಶಾಸಕನಾಗಿರುವ ನಾನೂ ಮಂತ್ರಿ ಸ್ಥಾನದ ಆಕಾಂಕ್ಷಿ. ಅದಕ್ಕಾಗಿ ಮನೆದೇವರಿಗೆ ಪೂಜೆ ಸಲ್ಲಿಸುವುದಕ್ಕಾಗಿ ಬಂದಿದ್ದೇನೆ. ಜಾತ್ರೆ ಸಂದರ್ಭದಲ್ಲಿ ದೇವರಿಗೆ ಆಗಮಿಸಲು ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ ಎಂದು ಹೇಳಿದರು.</p>.<p>ಶರಾವತಿ, ಮಡೇನೂರು ಡ್ಯಾಂ ನಿರ್ಮಾಣಕ್ಕೆ ಈ ಭಾಗದ ಸಾಕಷ್ಟು ಜನ ತಮ್ಮ ಮೂಲನೆಲೆಯನ್ನು ಕಳೆದುಕೊಂಡಿದ್ದಾರೆ. ಇದೀಗ ಅಣುಸ್ಥಾವರ ಸ್ಥಾಪನೆಗೆ ವಿಮಾನದಲ್ಲಿ ಸರ್ವೇ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಅಣುಸ್ಥಾವರ ನಿರ್ಮಾಣ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಸಂಸದರು ಅಣುಸ್ಥಾವರ ಆಗದಂತೆ ತಡೆಯಬೇಕು ಎಂದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಮುಖಂಡರಾದ ಗೋಣಿ ಮಾಲತೇಶ್, ರವೀಂದ್ರ, ಪಾಲಾಕ್ಷಣ್ಣ, ಭಂಡಾರಿ ಮಾಲತೇಶ್, ಚಂದ್ರಶೇಖರಗೌಡ, ಸುರೇಶ್ ಧಾರವಾಡ, ಹುಲ್ಮಾರ್ ಶಿವು ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-42-491382362</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಂತ್ರಿ ಸ್ಥಾನ ಸಿಗಲಿ ಎಂಬ ಆಶಯದಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮನೆದೇವರಾದ ಪಟ್ಟಣದ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.</p>.<p>‘ಮೂರುಬಾರಿ ಶಾಸಕನಾಗಿರುವ ನಾನೂ ಮಂತ್ರಿ ಸ್ಥಾನದ ಆಕಾಂಕ್ಷಿ. ಅದಕ್ಕಾಗಿ ಮನೆದೇವರಿಗೆ ಪೂಜೆ ಸಲ್ಲಿಸುವುದಕ್ಕಾಗಿ ಬಂದಿದ್ದೇನೆ. ಜಾತ್ರೆ ಸಂದರ್ಭದಲ್ಲಿ ದೇವರಿಗೆ ಆಗಮಿಸಲು ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ ಎಂದು ಹೇಳಿದರು.</p>.<p>ಶರಾವತಿ, ಮಡೇನೂರು ಡ್ಯಾಂ ನಿರ್ಮಾಣಕ್ಕೆ ಈ ಭಾಗದ ಸಾಕಷ್ಟು ಜನ ತಮ್ಮ ಮೂಲನೆಲೆಯನ್ನು ಕಳೆದುಕೊಂಡಿದ್ದಾರೆ. ಇದೀಗ ಅಣುಸ್ಥಾವರ ಸ್ಥಾಪನೆಗೆ ವಿಮಾನದಲ್ಲಿ ಸರ್ವೇ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಅಣುಸ್ಥಾವರ ನಿರ್ಮಾಣ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಸಂಸದರು ಅಣುಸ್ಥಾವರ ಆಗದಂತೆ ತಡೆಯಬೇಕು ಎಂದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಮುಖಂಡರಾದ ಗೋಣಿ ಮಾಲತೇಶ್, ರವೀಂದ್ರ, ಪಾಲಾಕ್ಷಣ್ಣ, ಭಂಡಾರಿ ಮಾಲತೇಶ್, ಚಂದ್ರಶೇಖರಗೌಡ, ಸುರೇಶ್ ಧಾರವಾಡ, ಹುಲ್ಮಾರ್ ಶಿವು ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-42-491382362</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>