ಅಂದುಕೊಂಡಂತೆ 1998ರಲ್ಲಿ ಭದ್ರಾವತಿಯ ನ್ಯೂಟೌನ್ನಲ್ಲಿ ಸಿದ್ಧಾರ್ಥ ಅಂಧರ ಕೇಂದ್ರ ತೆರೆದರು. ಅಂದಿನಿಂದ ಈವರೆಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ, ಸರ್ಕಾರದ ಅನುದಾನವಿಲ್ಲದೆ ಎಸ್ಎಸ್ಎಲ್ಸಿ ನಂತರ ಅಂಧ ಮಕ್ಕಳಿಗೆ ಉಚಿತ ಊಟ, ಉಪಾಹಾರ, ಸಮವಸ್ತ್ರ ವಸತಿ, ವಿದ್ಯಾಭ್ಯಾಸದ ಜತೆಗೆ ವಿವಿಧ ಕರಕುಶಲ, ಸಂಗೀತ ತರಬೇತಿ ನೀಡುತ್ತಿದ್ದಾರೆ. ಬೀದರ್, ಕಲಬುರ್ಗಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಮೈಸೂರು ಸೇರಿ ನಾನಾ ಭಾಗಗಳ 30ಕ್ಕೂ ಹೆಚ್ಚು ಮಕ್ಕಳು ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇವರೆಲ್ಲರನ್ನು ಸ್ವಂತ ಮಕ್ಕಳಂತೆ ಕಾಣುವ ಶಿವಬಸಪ್ಪ ದಂಪತಿ ಸದಾ ಅವರ ಏಳಿಗೆಗಾಗಿ ದುಡಿಯುತ್ತಿದ್ದಾರೆ. ತಿಂಗಳಿಗೆ ₹ 20 ಸಾವಿರದಿಂದ ₹25 ಸಾವಿರದವರೆಗೆ ಖರ್ಚು ಬಂದರೂ ಕೇಂದ್ರದ ಟ್ರಸ್ಟಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದದಂಪತಿ ಸೇವೆ ಮುಂದುವರಿಸಿದ್ದಾರೆ.