<p>ಶಿರಸಿ: ಕೇಂದ್ರದ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ವಹಿಸಬೇಕು ಎಂದು ಶಿರಸಿ ಪಶ್ಚಿಮ ಭಾಗದ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ನವೀನ ಶೆಟ್ಟಿ ಆಗ್ರಹಿಸಿದರು.</p>.<p>ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಾಯತ್ರಾಜ್ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಆಡಳಿತ ಇರುವುದರಿಂದ ಕೇಂದ್ರದಿಂದ ಬರಬೇಕಾದ ಸಾವಿರಾರು ಕೋಟಿ ರೂಪಾಯಿ ಅನುದಾನ ಸ್ಥಗಿತಗೊಂಡಿದೆ’ ಎಂದು ಆರೋಪಿಸಿದರು.</p>.<p>‘15ನೇ ಹಣಕಾಸು ಆಯೋಗದ ನಿಯಮದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳಿರಬೇಕು, ಇಲ್ಲವಾದಲ್ಲಿ ಹಣ ಬಿಡುಗಡೆಯಾಗುವುದಿಲ್ಲ. ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ಸುಮಾರು ₹3 ರಿಂದ ₹4 ಸಾವಿರ ಕೋಟಿ ಅನುದಾನ ನಷ್ಟವಾಗುವ ಭೀತಿ ಎದುರಾಗಿದೆ. 2021-26ರ ಅವಧಿಗೆ ನಿಗದಿಪಡಿಸಲಾದ ₹18,948 ಕೋಟಿಗಳಲ್ಲಿ ಬಾಕಿ ಇರುವ ಮೊತ್ತವನ್ನು ಪಡೆಯಲು ಮಾರ್ಚ್ 31ರ ಒಳಗಾಗಿ ಚುನಾವಣೆ ನಡೆಸಿ ಚುನಾಯಿತ ಪ್ರತಿನಿಧಿಗಳು ಅಧಿಕಾರ ವಹಿಸಿಕೊಳ್ಳುವುದು ಅನಿವಾರ್ಯವಾಗಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ಪ್ರತಿ ಪಂಚಾಯಿತಿಗೆ ಬರಬೇಕಾದ ಅಂದಾಜು ₹43 ಲಕ್ಷ ಹಣ ಬಾರದಂತಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.</p>.<p>‘ಕೇಂದ್ರ ಕೇಳಿರುವ ದಾಖಲೆಗಳನ್ನು ರಾಜ್ಯ ಸರ್ಕಾರ ಕೂಡಲೇ ಒದಗಿಸಿ ಅನುದಾನ ಬಿಡುಗಡೆಗೆ ಶ್ರಮಿಸಬೇಕು. ತಪ್ಪಿದಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಒಕ್ಕೂಟದ ಪದಾಧಿಕಾರಿಗಳಾದ ನಾರಾಯಣ ಹೆಗಡೆ, ಮಂಜುನಾಥ ಪೂಜಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-20-73352661</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಕೇಂದ್ರದ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ವಹಿಸಬೇಕು ಎಂದು ಶಿರಸಿ ಪಶ್ಚಿಮ ಭಾಗದ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ನವೀನ ಶೆಟ್ಟಿ ಆಗ್ರಹಿಸಿದರು.</p>.<p>ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಾಯತ್ರಾಜ್ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಆಡಳಿತ ಇರುವುದರಿಂದ ಕೇಂದ್ರದಿಂದ ಬರಬೇಕಾದ ಸಾವಿರಾರು ಕೋಟಿ ರೂಪಾಯಿ ಅನುದಾನ ಸ್ಥಗಿತಗೊಂಡಿದೆ’ ಎಂದು ಆರೋಪಿಸಿದರು.</p>.<p>‘15ನೇ ಹಣಕಾಸು ಆಯೋಗದ ನಿಯಮದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳಿರಬೇಕು, ಇಲ್ಲವಾದಲ್ಲಿ ಹಣ ಬಿಡುಗಡೆಯಾಗುವುದಿಲ್ಲ. ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ಸುಮಾರು ₹3 ರಿಂದ ₹4 ಸಾವಿರ ಕೋಟಿ ಅನುದಾನ ನಷ್ಟವಾಗುವ ಭೀತಿ ಎದುರಾಗಿದೆ. 2021-26ರ ಅವಧಿಗೆ ನಿಗದಿಪಡಿಸಲಾದ ₹18,948 ಕೋಟಿಗಳಲ್ಲಿ ಬಾಕಿ ಇರುವ ಮೊತ್ತವನ್ನು ಪಡೆಯಲು ಮಾರ್ಚ್ 31ರ ಒಳಗಾಗಿ ಚುನಾವಣೆ ನಡೆಸಿ ಚುನಾಯಿತ ಪ್ರತಿನಿಧಿಗಳು ಅಧಿಕಾರ ವಹಿಸಿಕೊಳ್ಳುವುದು ಅನಿವಾರ್ಯವಾಗಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ಪ್ರತಿ ಪಂಚಾಯಿತಿಗೆ ಬರಬೇಕಾದ ಅಂದಾಜು ₹43 ಲಕ್ಷ ಹಣ ಬಾರದಂತಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.</p>.<p>‘ಕೇಂದ್ರ ಕೇಳಿರುವ ದಾಖಲೆಗಳನ್ನು ರಾಜ್ಯ ಸರ್ಕಾರ ಕೂಡಲೇ ಒದಗಿಸಿ ಅನುದಾನ ಬಿಡುಗಡೆಗೆ ಶ್ರಮಿಸಬೇಕು. ತಪ್ಪಿದಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಒಕ್ಕೂಟದ ಪದಾಧಿಕಾರಿಗಳಾದ ನಾರಾಯಣ ಹೆಗಡೆ, ಮಂಜುನಾಥ ಪೂಜಾರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-20-73352661</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>