ಇನ್ನೆರಡು ದಿನಗಳಲ್ಲಿ ಅಂತಿಮ ವರದಿ:ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ಹಾಗೂ ಎಫ್ಎಸ್ಎಲ್ ವರದಿಯನ್ನು ಮಣಿಪಾಲ ಆಸ್ಪತ್ರೆಯ ವೈದ್ಯರಿಗೆ ನೀಡಿದ್ದಾರೆ. ಎರಡೂ ವರದಿಗಳನ್ನು ತಾಳೆ ಹಾಕಿ, ಶಿರೂರು ಶ್ರೀಗಳ ಸಾವಿಗೆ ನಿಖರ ಕಾರಣ ಪತ್ತೆಹಚ್ಚಿ, ಅಂತಿಮ ವರದಿಯನ್ನು ವಾರಾಂತ್ಯದೊಳಗೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ವರದಿ ಬಂದ ನಂತರ ಶ್ರೀಗಳ ಸಾವಿನ ಹಿಂದಿರುವ ಸತ್ಯವನ್ನು ಪೊಲೀಸರು ಬಹಿರಂಗಗೊಳಿಸಲಿದ್ದಾರೆ.