ಜೋಡುಪಾಲದ ರಕ್ಷಣಾ ಕಾರ್ಯಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೋರಿದ ಮುತುವರ್ಜಿ ಮಾದರಿಯಾಗಿದೆ. ಜಿಲ್ಲೆ ಬೇರೆಯಾಗಿದ್ದರೂ ಇಲ್ಲಿನ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಪೊಲೀಸ್ ಸಿಬ್ಬಂದಿ ಮಾಡಿರುವ ಕೆಲಸ ಮಹತ್ವದ್ದಾಗಿದೆ. ಕೊಡಗಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದ ಸಂದರ್ಭದಲ್ಲಿ ಜೋಡುಪಾಲದ ಜನರ ರಕ್ಷಣೆಗೆ ಧಾವಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸರು ಮಾನವೀಯ ಕಾರ್ಯ ಮಾಡಿದ್ದಾರೆ. ಅವರ ಸೇವೆಯನ್ನು ಇಲಾಖೆ ಪರಿಗಣಿಸಿದ್ದು, ಸೂಕ್ತ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.