<p><strong>ಬೆಂಗಳೂರು:</strong> ‘ಶಿವಮೊಗ್ಗದ ಸಕ್ಕರೆ ಬೈಲು ಆನೆ ಶಿಬಿರದ ಬಾಲಣ್ಣ ಎಂಬ ಆನೆಗೆ ಚುಚ್ಚುಮದ್ದು ನೀಡುವಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ’ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಸೂಚಿಸಿದ್ದಾರೆ.</p>.<p>ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಅವರು, ‘ಬಾಲಣ್ಣ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಸೋಂಕು ತಗುಲಿದೆ. ಜತೆಗೆ ಶಿಬಿರದಲ್ಲಿರುವ ನಾಲ್ಕು ಆನೆಗಳು ಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲು ವೈದ್ಯಾಧಿಕಾರಿ ಇಲ್ಲ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಬಗ್ಗೆ ವಿವರಣೆ ನೀಡಿ’ ಎಂದು ಸೂಚಿಸಿದ್ದಾರೆ.</p>.<p>‘ಆನೆ ಶಿಬಿರಗಳಲ್ಲಿ ವೈದ್ಯಾಧಿಕಾರಿಗಳು ಇರಲೇಬೇಕು. ಇಲ್ಲದೇ ಇದ್ದರೆ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಈ ಹಿಂದೆಯೇ ಸೂಚಿಸಲಾಗಿತ್ತು. ಹೀಗಿದ್ದೂ ಶಿಬಿರಗಳಲ್ಲಿ ವೈದ್ಯಾಧಿಕಾರಿಗಳ ನೇಮಕ ಏಕೆ ನಡೆದಿಲ್ಲ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಬಾಲಣ್ಣ ಆನೆಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಏಕಾಯಿತು ಎಂಬುದನ್ನು ಪತ್ತೆ ಮಾಡಿ. ಅದಕ್ಕೆ ಕಾರಣರಾದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಿ. ಈ ಬಗ್ಗೆ ಒಂದು ವಾರದ ಒಳಗೆ ವರದಿ ಸಲ್ಲಿಸಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶಿವಮೊಗ್ಗದ ಸಕ್ಕರೆ ಬೈಲು ಆನೆ ಶಿಬಿರದ ಬಾಲಣ್ಣ ಎಂಬ ಆನೆಗೆ ಚುಚ್ಚುಮದ್ದು ನೀಡುವಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ’ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಸೂಚಿಸಿದ್ದಾರೆ.</p>.<p>ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಅವರು, ‘ಬಾಲಣ್ಣ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಸೋಂಕು ತಗುಲಿದೆ. ಜತೆಗೆ ಶಿಬಿರದಲ್ಲಿರುವ ನಾಲ್ಕು ಆನೆಗಳು ಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲು ವೈದ್ಯಾಧಿಕಾರಿ ಇಲ್ಲ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಬಗ್ಗೆ ವಿವರಣೆ ನೀಡಿ’ ಎಂದು ಸೂಚಿಸಿದ್ದಾರೆ.</p>.<p>‘ಆನೆ ಶಿಬಿರಗಳಲ್ಲಿ ವೈದ್ಯಾಧಿಕಾರಿಗಳು ಇರಲೇಬೇಕು. ಇಲ್ಲದೇ ಇದ್ದರೆ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಈ ಹಿಂದೆಯೇ ಸೂಚಿಸಲಾಗಿತ್ತು. ಹೀಗಿದ್ದೂ ಶಿಬಿರಗಳಲ್ಲಿ ವೈದ್ಯಾಧಿಕಾರಿಗಳ ನೇಮಕ ಏಕೆ ನಡೆದಿಲ್ಲ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಬಾಲಣ್ಣ ಆನೆಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಏಕಾಯಿತು ಎಂಬುದನ್ನು ಪತ್ತೆ ಮಾಡಿ. ಅದಕ್ಕೆ ಕಾರಣರಾದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಿ. ಈ ಬಗ್ಗೆ ಒಂದು ವಾರದ ಒಳಗೆ ವರದಿ ಸಲ್ಲಿಸಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>