<p>ತ್ಯಾಗರ್ತಿ: ‘ತಾಲ್ಲೂಕಿನಲ್ಲಿ ಸಣ್ಣ ರೈತರಿಗೆ ಅನಾವಶ್ಯಕ ಕಿರುಕುಳ ನೀಡಲಾಗುತ್ತಿದೆ. ಇದಕ್ಕೆಲ್ಲಾ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ ಕಾರಣ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸುಜಾತಾ ಎಂಬುವವರ 15 ಗುಂಟೆ ಜಮೀನು ತೆರವುಗೊಳಿಸಿದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಶರಾವತಿ ಮುಳುಗಡೆ ಸಂತ್ರಸ್ತರು ತಮ್ಮ ಪೂರ್ವಜರ ಕಾಲದಿಂದಲೂ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಯಾರೋ ರಾಜಕೀಯ ಪುಡಾರಿ ಹೇಳಿದ ಮಾತು ಕೇಳಿ ಅವರಿಂದ ಜಮೀನು ಕಿತ್ತುಕೊಳ್ಳಲು ಮುಂದಾಗುವುದು ಅಕ್ಷಮ್ಯ ಅಪರಾಧ’ ಎಂದು ಕಿಡಿಕಾರಿದರು.</p>.<p>‘ಇದನ್ನು ಡಿಎಫ್ಒ ಮಾಡಿರಲು ಸಾಧ್ಯವಿಲ್ಲ. ಅವರ ಕೆಳಹಂತದ ಅಧಿಕಾರಿಗಳು ಮಾಡಿರಬೇಕು. ಈ ಘಟನೆ ಅವರ ಗಮನಕ್ಕೆ ಬಂದ ಕೂಡಲೇ ಯಾವ ಕ್ರಮ ಕೈಗೊಂಡಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ಸ್ಥಳದಲ್ಲಿಯೇ ಡಿಎಫ್ಒಗೆ ಕರೆ ಮಾಡಿದ ಹರತಾಳು ಹಾಲಪ್ಪ, ‘ಸ್ಥಳ ಪರಿಶೀಲನೆ ಮಾಡದೇ ಹೇಗೆ ತೆರವುಗೊಳಿಸಿದ್ದೀರಿ. ಬಡ ರೈತರ ಮೇಲೆ ಈ ರೀತಿಯ ದೌರ್ಜನ್ಯ ಸರಿಯೇ’ ಎಂದು ಪ್ರಶ್ನಿಸಿದರು. ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಜಿ.ಪಂ. ಮಾಜಿ ಸದಸ್ಯರಾದ ರತ್ನಾಕರ ಹೊನಗೋಡು, ಹಕ್ರೆ ಮಲ್ಲಿಕಾರ್ಜುನ, ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಲ್ಲಿಕಾ ಮಂಜುನಾಥ್, ಶಾಂತಪ್ಪ ಗೌಡ, ದೇವೇಂದ್ರಪ್ಪ ಯಲಕುಂದ್ಲಿ, ಕೃಷ್ಣಮೂರ್ತಿ ಹೊಸಂತೆ, ಶ್ರೀಧರ ಸಂಪಳ್ಳಿ ಹಾಗೂ ಹಲವು ಮುಖಂಡರು ಇದ್ದರು.</p>.<p>ತ್ಯಾಗರ್ತಿ: ‘ಮೂರು ಎಕರೆಯೊಳಗಿನ ಯಾವ ಸಾಗುವಳಿದಾರರಿಗೂ ತೊಂದರೆ ನೀಡಬಾರದು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರ ಆದೇಶಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು 15 ಗುಂಟೆ ಜಮೀನು ತೆರವುಗೊಳಿಸಲು ಮುಂದಾಗಿದ್ದು ಖಂಡನೀಯ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಇದು ಹೀಗೆ ಮುಂದುವರಿದರೆ ಪಕ್ಷದ ನಾಯಕರೆಲ್ಲರೂ ಸೇರಿ ಹೋರಾಟ ನಡೆಸುತ್ತೇವೆ. ಆ ಮೂಲಕ ಉತ್ತರ ನೀಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-42-364262609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ಯಾಗರ್ತಿ: ‘ತಾಲ್ಲೂಕಿನಲ್ಲಿ ಸಣ್ಣ ರೈತರಿಗೆ ಅನಾವಶ್ಯಕ ಕಿರುಕುಳ ನೀಡಲಾಗುತ್ತಿದೆ. ಇದಕ್ಕೆಲ್ಲಾ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ ಕಾರಣ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸುಜಾತಾ ಎಂಬುವವರ 15 ಗುಂಟೆ ಜಮೀನು ತೆರವುಗೊಳಿಸಿದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಶರಾವತಿ ಮುಳುಗಡೆ ಸಂತ್ರಸ್ತರು ತಮ್ಮ ಪೂರ್ವಜರ ಕಾಲದಿಂದಲೂ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಯಾರೋ ರಾಜಕೀಯ ಪುಡಾರಿ ಹೇಳಿದ ಮಾತು ಕೇಳಿ ಅವರಿಂದ ಜಮೀನು ಕಿತ್ತುಕೊಳ್ಳಲು ಮುಂದಾಗುವುದು ಅಕ್ಷಮ್ಯ ಅಪರಾಧ’ ಎಂದು ಕಿಡಿಕಾರಿದರು.</p>.<p>‘ಇದನ್ನು ಡಿಎಫ್ಒ ಮಾಡಿರಲು ಸಾಧ್ಯವಿಲ್ಲ. ಅವರ ಕೆಳಹಂತದ ಅಧಿಕಾರಿಗಳು ಮಾಡಿರಬೇಕು. ಈ ಘಟನೆ ಅವರ ಗಮನಕ್ಕೆ ಬಂದ ಕೂಡಲೇ ಯಾವ ಕ್ರಮ ಕೈಗೊಂಡಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>ಸ್ಥಳದಲ್ಲಿಯೇ ಡಿಎಫ್ಒಗೆ ಕರೆ ಮಾಡಿದ ಹರತಾಳು ಹಾಲಪ್ಪ, ‘ಸ್ಥಳ ಪರಿಶೀಲನೆ ಮಾಡದೇ ಹೇಗೆ ತೆರವುಗೊಳಿಸಿದ್ದೀರಿ. ಬಡ ರೈತರ ಮೇಲೆ ಈ ರೀತಿಯ ದೌರ್ಜನ್ಯ ಸರಿಯೇ’ ಎಂದು ಪ್ರಶ್ನಿಸಿದರು. ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಜಿ.ಪಂ. ಮಾಜಿ ಸದಸ್ಯರಾದ ರತ್ನಾಕರ ಹೊನಗೋಡು, ಹಕ್ರೆ ಮಲ್ಲಿಕಾರ್ಜುನ, ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಲ್ಲಿಕಾ ಮಂಜುನಾಥ್, ಶಾಂತಪ್ಪ ಗೌಡ, ದೇವೇಂದ್ರಪ್ಪ ಯಲಕುಂದ್ಲಿ, ಕೃಷ್ಣಮೂರ್ತಿ ಹೊಸಂತೆ, ಶ್ರೀಧರ ಸಂಪಳ್ಳಿ ಹಾಗೂ ಹಲವು ಮುಖಂಡರು ಇದ್ದರು.</p>.<p>ತ್ಯಾಗರ್ತಿ: ‘ಮೂರು ಎಕರೆಯೊಳಗಿನ ಯಾವ ಸಾಗುವಳಿದಾರರಿಗೂ ತೊಂದರೆ ನೀಡಬಾರದು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರ ಆದೇಶಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು 15 ಗುಂಟೆ ಜಮೀನು ತೆರವುಗೊಳಿಸಲು ಮುಂದಾಗಿದ್ದು ಖಂಡನೀಯ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಇದು ಹೀಗೆ ಮುಂದುವರಿದರೆ ಪಕ್ಷದ ನಾಯಕರೆಲ್ಲರೂ ಸೇರಿ ಹೋರಾಟ ನಡೆಸುತ್ತೇವೆ. ಆ ಮೂಲಕ ಉತ್ತರ ನೀಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-42-364262609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>