<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಬಡವರಿಗೆ ವಸತಿ ಕಲ್ಪಿಸಲು ಶಿವಮೊಗ್ಗದ ನಿಧಿಗೆ ಹೋಬಳಿಯ ಊರಗಡೂರು ಗ್ರಾಮದಲ್ಲಿ ಸ್ವಾಧೀನಕ್ಕೆ ತೆಗೆದುಕೊಂಡಿರುವ 60 ಎಕರೆ 33 ಗುಂಟೆಯಷ್ಟು ಜಮೀನಿಗೆ ಸಂಬಂಧಿಸಿದಂತೆ, ಭೂಮಾಲೀಕರಿಗೆ ನಿವೇಶನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.</p>.<p>ವಿಧಾನ ಪರಿಷತ್ತಿನಲ್ಲಿ ಗುರುವಾರ ಬಲ್ಕೀಸ್ ಬಾನು, ರಮೇಶ್ ಬಾಬು, ಡಿ.ಎಸ್.ಅರುಣ್ ಅವರು ಸರ್ಕಾರದ ಗಮನಸೆಳೆದು, ‘ಈ ರೈತರಿಗೆ ಘೋಷಿಸಿರುವ ಪರಿಹಾರ ತೀರಾ ಕಡಿಮೆ. ಅವರಿಗೆ ಈಗಿನ ಮಾರುಕಟ್ಟೆ ದರದಲ್ಲಿ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಚಿವ ಸುರೇಶ್, ‘ಸದರಿ ಜಮೀನುಗಳಿಗೆ ಸಂಬಂಧಿಸಿದಂತೆ 1984ರಲ್ಲಿ ಪ್ರಾಥಮಿಕ ಮತ್ತು 1987ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳು ನಡೆದು, 1995ನೇ ಸಾಲಿನ ದರದಂತೆ 2006ರಲ್ಲಿ ಪರಿಹಾರ ನಿಗದಿ ಮಾಡಲಾಗಿದೆ. ಪ್ರತಿ ಎಕರೆ ತರಿ ಜಮೀನಿಗೆ ₹19,753 ಮತ್ತು ಪ್ರತಿ ಎಕರೆ ಖುಷ್ಕಿ ಜಮೀನಿಗೆ ₹12,325ರಂತೆ ಒಟ್ಟು ₹20.69 ಲಕ್ಷವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗಿದೆ. ಅದಕ್ಕಿಂತ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.</p>.<p>ಬಲ್ಕಿಸ್ ಬಾನು, ‘ಇದು ನ್ಯಾಯವಲ್ಲ. ಸರ್ಕಾರದ ನಿರ್ಧಾರ ಮತ್ತು ಹೈಕೋರ್ಟ್ನ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲೂ ಆ ಜನರಿಗೆ ಆರ್ಥಿಕ ಶಕ್ತಿಯಿಲ್ಲ. ಇದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು’ ಎಂದರು. ಈಗಿನ ಮಾರುಕಟ್ಟೆ ದರದಲ್ಲಿಯೇ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ನ ರಮೇಶ್ ಬಾಬು, ನಸೀರ್ ಅಹ್ಮದ್ ಮತ್ತು ಬಿಜೆಪಿಯ ಡಿ.ಎಸ್.ಅರುಣ್ ಒತ್ತಾಯಿಸಿದರು.</p>.<p>ಒತ್ತಾಯಕ್ಕೆ ಮಣಿದ ಬೈರತಿ ಸುರೇಶ್, ‘ಕಾನೂನಿನಲ್ಲಿ ಇದಕ್ಕೆ ಅವಕಾಶವೇ ಇಲ್ಲ. ಆದರೆ ಮಾನವೀಯತೆ ದೃಷ್ಟಿಯಿಂದ ಈ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ನೋಡುತ್ತೇನೆ. ಸಾಧ್ಯವಿದ್ದರೆ ಮಾತ್ರ ನಿವೇಶನ ನೀಡುತ್ತೇವೆ. ನಿವೇಶನ ಕೊಟ್ಟೇಕೊಡುತ್ತೇವೆ ಎಂದು ಭರವಸೆ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಬಡವರಿಗೆ ವಸತಿ ಕಲ್ಪಿಸಲು ಶಿವಮೊಗ್ಗದ ನಿಧಿಗೆ ಹೋಬಳಿಯ ಊರಗಡೂರು ಗ್ರಾಮದಲ್ಲಿ ಸ್ವಾಧೀನಕ್ಕೆ ತೆಗೆದುಕೊಂಡಿರುವ 60 ಎಕರೆ 33 ಗುಂಟೆಯಷ್ಟು ಜಮೀನಿಗೆ ಸಂಬಂಧಿಸಿದಂತೆ, ಭೂಮಾಲೀಕರಿಗೆ ನಿವೇಶನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.</p>.<p>ವಿಧಾನ ಪರಿಷತ್ತಿನಲ್ಲಿ ಗುರುವಾರ ಬಲ್ಕೀಸ್ ಬಾನು, ರಮೇಶ್ ಬಾಬು, ಡಿ.ಎಸ್.ಅರುಣ್ ಅವರು ಸರ್ಕಾರದ ಗಮನಸೆಳೆದು, ‘ಈ ರೈತರಿಗೆ ಘೋಷಿಸಿರುವ ಪರಿಹಾರ ತೀರಾ ಕಡಿಮೆ. ಅವರಿಗೆ ಈಗಿನ ಮಾರುಕಟ್ಟೆ ದರದಲ್ಲಿ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಚಿವ ಸುರೇಶ್, ‘ಸದರಿ ಜಮೀನುಗಳಿಗೆ ಸಂಬಂಧಿಸಿದಂತೆ 1984ರಲ್ಲಿ ಪ್ರಾಥಮಿಕ ಮತ್ತು 1987ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳು ನಡೆದು, 1995ನೇ ಸಾಲಿನ ದರದಂತೆ 2006ರಲ್ಲಿ ಪರಿಹಾರ ನಿಗದಿ ಮಾಡಲಾಗಿದೆ. ಪ್ರತಿ ಎಕರೆ ತರಿ ಜಮೀನಿಗೆ ₹19,753 ಮತ್ತು ಪ್ರತಿ ಎಕರೆ ಖುಷ್ಕಿ ಜಮೀನಿಗೆ ₹12,325ರಂತೆ ಒಟ್ಟು ₹20.69 ಲಕ್ಷವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗಿದೆ. ಅದಕ್ಕಿಂತ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು.</p>.<p>ಬಲ್ಕಿಸ್ ಬಾನು, ‘ಇದು ನ್ಯಾಯವಲ್ಲ. ಸರ್ಕಾರದ ನಿರ್ಧಾರ ಮತ್ತು ಹೈಕೋರ್ಟ್ನ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲೂ ಆ ಜನರಿಗೆ ಆರ್ಥಿಕ ಶಕ್ತಿಯಿಲ್ಲ. ಇದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು’ ಎಂದರು. ಈಗಿನ ಮಾರುಕಟ್ಟೆ ದರದಲ್ಲಿಯೇ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ನ ರಮೇಶ್ ಬಾಬು, ನಸೀರ್ ಅಹ್ಮದ್ ಮತ್ತು ಬಿಜೆಪಿಯ ಡಿ.ಎಸ್.ಅರುಣ್ ಒತ್ತಾಯಿಸಿದರು.</p>.<p>ಒತ್ತಾಯಕ್ಕೆ ಮಣಿದ ಬೈರತಿ ಸುರೇಶ್, ‘ಕಾನೂನಿನಲ್ಲಿ ಇದಕ್ಕೆ ಅವಕಾಶವೇ ಇಲ್ಲ. ಆದರೆ ಮಾನವೀಯತೆ ದೃಷ್ಟಿಯಿಂದ ಈ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ. ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ನೋಡುತ್ತೇನೆ. ಸಾಧ್ಯವಿದ್ದರೆ ಮಾತ್ರ ನಿವೇಶನ ನೀಡುತ್ತೇವೆ. ನಿವೇಶನ ಕೊಟ್ಟೇಕೊಡುತ್ತೇವೆ ಎಂದು ಭರವಸೆ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>