ಕಪ್ಪುಪಟ್ಟಿ ಪ್ರದರ್ಶಿಸಿದರು. ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಸಚಿವರು ಪಠ್ಯ ಹರಿದು ಹಾಕಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ದೇಶದ್ರೋಹಿ ಎಂದು ನಿಂದಿಸಿದರು.
ಪೊಲೀಸ್ ಭದ್ರತೆಯ ಕಣ್ಣು ತಪ್ಪಿಸಿ ಸಭೆಗೆ ನುಗ್ಗಿ ಪ್ರತಿಭಟನೆ ನಡೆದಿದ್ದು ಸಭೆಯಲ್ಲಿ ಕೆಲಕಾಲ ಗೊಂದಲ ಮೂಡಿಸಿತು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹರಿಕೃಷ್ಣ, ಕಾರ್ಯಕರ್ತರಾದ ಜಗದೀಶ್, ದರ್ಶನ್, ಪ್ರದೀಪ್, ವಿಶ್ವನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು. ನಂತರ ಜಿಲ್ಲಾ ಪಂಚಾಯ್ತಿ ಕಚೇರಿ ಮುಖ್ಯಗೇಟ್ ಮುಚ್ಚಲಾಯಿತು. ಪ್ರತಿಭಟನೆ ನಂತರ ಜಿಲ್ಲಾ ಪಂಚಾಯ್ತಿ ಕಚೇರಿ ಹಾಗೂ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಯಿತು. ಸಭೆಯ ನಂತರ ಮಧು ಬಂಗಾರಪ್ಪ ಜಿಲ್ಲಾ ಕಾಂಗ್ರೆಸ್ ಕಚೇರಿಗೂ ಭೇಟಿ ನೀಡಿದರು.
ಕಪ್ಪು ಪಟ್ಟಿ ಪ್ರದರ್ಶಿಸುವವರೆಲ್ಲ ಹೋರಾಟಗಾರರಲ್ಲ : ಮಧು ಬಂಗಾರಪ್ಪ
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ಅವರು (ಪ್ರತಿಭಟನಾಕಾರರು) ಮೊದಲು ಪಠ್ಯ ಓದಲಿ. ನಂತರ ಪ್ರತಿಭಟನೆ ಮಾಡಲಿ ಎಂದು ಸಲಹೆ ನೀಡಿದರು.
ಬಿಜೆಪಿಯವರ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಠ್ಯ ಪರಿಷ್ಕರಣೆ ಮಾಡಿದ್ದೇವೆ. ಅವರಿಗೆ ಪ್ರತಿಭಟನೆ ಮಾಡುವುದು ಬೇರೇನು ಕೆಲಸವಿಲ್ಲ
ಅವರಷ್ಟು ದಡ್ಡರನ್ನು ನಾನು ನೋಡಿಯೇ ಇಲ್ಲ. ಮೊದಲು ಅವರು ಪುಸ್ತಕ ಓದಲಿ. ಕಪ್ಪು ಪಟ್ಟಿ ಪ್ರದರ್ಶಿಸುವವರೆಲ್ಲ ಹೋರಾಟಗಾರರಲ್ಲ ಎಂದು ಛೇಡಿಸಿದರು.