<p><strong>ಬೆಂಗಳೂರು:</strong> ರಾಜ್ಯ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನ್ಯಾಯಾಲಯ ನಿರ್ದೇಶಿಸಿದೆ.</p>.<p>‘ನನ್ನ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಶಾಶ್ವತ ನಿರ್ಬಂಧ ಹೇರಬೇಕು’ ಎಂದು ಕೋರಿ ಶಿವಾನಂದ ಪಾಟೀಲ ಸಲ್ಲಿಸಿರುವ ಅಸಲು ದಾವೆಯನ್ನು ನಗರದ 27ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ವಿಚಾರಣೆ ನಡೆಸಿತು.</p>.<p>ದಾವೆದಾರ ಶಿವಾನಂದ ಪಾಟೀಲ ಅವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದ ನ್ಯಾಯಾಲಯ ಪ್ರತಿವಾದಿ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಲಾಗಿದೆ.</p>.<p><strong>ಪ್ರಾರ್ಥನೆ:</strong> ‘ಯತ್ನಾಳ್ ಅವರು ಹಲವು ಟಿ.ವಿ ಸಂದರ್ಶನಗಳಲ್ಲಿ ನನ್ನ ವಿರುದ್ಧ ಸುಳ್ಳು, ಆಧಾರರಹಿತ, ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಈ ಮೂಲಕ ನನ್ನ ಗೌರವ, ಘನತೆ ಮತ್ತು ಖ್ಯಾತಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ, ಯತ್ನಾಳ್ ಅವರು ನನ್ನ ವಿರುದ್ಧ ಯಾವುದೇ ಅವಹೇಳಕಾರಿ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಬೇಕು’ ಎಂದು ಶಿವಾನಂದ ಪಾಟೀಲ ದಾವೆಯಲ್ಲಿ ಪ್ರಾರ್ಥಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನ್ಯಾಯಾಲಯ ನಿರ್ದೇಶಿಸಿದೆ.</p>.<p>‘ನನ್ನ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಶಾಶ್ವತ ನಿರ್ಬಂಧ ಹೇರಬೇಕು’ ಎಂದು ಕೋರಿ ಶಿವಾನಂದ ಪಾಟೀಲ ಸಲ್ಲಿಸಿರುವ ಅಸಲು ದಾವೆಯನ್ನು ನಗರದ 27ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ವಿಚಾರಣೆ ನಡೆಸಿತು.</p>.<p>ದಾವೆದಾರ ಶಿವಾನಂದ ಪಾಟೀಲ ಅವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದ ನ್ಯಾಯಾಲಯ ಪ್ರತಿವಾದಿ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಲಾಗಿದೆ.</p>.<p><strong>ಪ್ರಾರ್ಥನೆ:</strong> ‘ಯತ್ನಾಳ್ ಅವರು ಹಲವು ಟಿ.ವಿ ಸಂದರ್ಶನಗಳಲ್ಲಿ ನನ್ನ ವಿರುದ್ಧ ಸುಳ್ಳು, ಆಧಾರರಹಿತ, ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಈ ಮೂಲಕ ನನ್ನ ಗೌರವ, ಘನತೆ ಮತ್ತು ಖ್ಯಾತಿಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ, ಯತ್ನಾಳ್ ಅವರು ನನ್ನ ವಿರುದ್ಧ ಯಾವುದೇ ಅವಹೇಳಕಾರಿ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಬೇಕು’ ಎಂದು ಶಿವಾನಂದ ಪಾಟೀಲ ದಾವೆಯಲ್ಲಿ ಪ್ರಾರ್ಥಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>