ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಅನಂತ ಕುಮಾರ್ ಹೆಗಡೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ತಂಗಡಗಿ, ‘ಹೆಗಡೆ ಮಾತಿಗೆ ನಾವು ಬೆಲೆ ಕೊಡುವುದಿಲ್ಲ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲವೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೇ ಹೇಳಿದ್ದಾರೆ. ಆ ಮೂಲಕ, ಆತ ಹುಚ್ಚ ಎಂದು ಬಿಜೆಪಿಯವರು ಒಪ್ಪಿಕೊಂಡಂತಾಗಿದೆ. ಹೆಗಡೆ ಮೇಲೆ ಕ್ರಮ ತೆಗೆದುಕೊಳ್ಳುವ ಕುರಿತು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಿರ್ಧರಿಸುತ್ತಾರೆ’ ಎಂದರು.