<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಹಾಲಿ ಸದಸ್ಯರಾಗಿರುವ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.</p>.<p>ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಶಿವಶಂಕರಪ್ಪ 2019ರ ಸೆಪ್ಟೆಂಬರ್ 3ರಂದು ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದರು.</p>.<p>ಕೃಷಿ ಎಂಜಿನಿಯರಿಂಗ್ ಪದವೀಧರರಾಗಿರುವ ಇವರ ಅಧಿಕಾರದ ಅವಧಿ ಇನ್ನೂ ಮೂರೂವರೆ ವರ್ಷ ಇದೆ.</p>.<p>ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಅವರು ಕೆಪಿಎಸ್ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.</p>.<p>ಅವರ ಸ್ಥಾನಕ್ಕೆ ಶಿವಶಂಕರಪ್ಪ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸು ಆಧರಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.</p>.<p>ಸದಸ್ಯರೊಬ್ಬರನ್ನೇ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದಾಗಿ ಕೆಪಿಎಸ್ಸಿಯಲ್ಲಿ ಒಂದು ಸದಸ್ಯ ಸ್ಥಾನ ಖಾಲಿ ಆದಂತಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/state-government-to-release-new-guidelines-for-movie-theatres-bs-yediyurappa-puneeth-rajkumar-819071.html" target="_blank">ಶೇ.50ರಷ್ಟು ಚಿತ್ರಮಂದಿರ ಭರ್ತಿ ಆದೇಶ: ಏ.7ರ ವರೆಗೆ ಹಿಂದಕ್ಕೆ ಪಡೆದ ಸರ್ಕಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಹಾಲಿ ಸದಸ್ಯರಾಗಿರುವ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.</p>.<p>ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಶಿವಶಂಕರಪ್ಪ 2019ರ ಸೆಪ್ಟೆಂಬರ್ 3ರಂದು ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದರು.</p>.<p>ಕೃಷಿ ಎಂಜಿನಿಯರಿಂಗ್ ಪದವೀಧರರಾಗಿರುವ ಇವರ ಅಧಿಕಾರದ ಅವಧಿ ಇನ್ನೂ ಮೂರೂವರೆ ವರ್ಷ ಇದೆ.</p>.<p>ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಅವರು ಕೆಪಿಎಸ್ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.</p>.<p>ಅವರ ಸ್ಥಾನಕ್ಕೆ ಶಿವಶಂಕರಪ್ಪ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸು ಆಧರಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.</p>.<p>ಸದಸ್ಯರೊಬ್ಬರನ್ನೇ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದಾಗಿ ಕೆಪಿಎಸ್ಸಿಯಲ್ಲಿ ಒಂದು ಸದಸ್ಯ ಸ್ಥಾನ ಖಾಲಿ ಆದಂತಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/state-government-to-release-new-guidelines-for-movie-theatres-bs-yediyurappa-puneeth-rajkumar-819071.html" target="_blank">ಶೇ.50ರಷ್ಟು ಚಿತ್ರಮಂದಿರ ಭರ್ತಿ ಆದೇಶ: ಏ.7ರ ವರೆಗೆ ಹಿಂದಕ್ಕೆ ಪಡೆದ ಸರ್ಕಾರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>