<p><strong>ಬೆಂಗಳೂರು:</strong> ವಿಶ್ವದರ್ಜೆಯ ಬಹುಮಾದರಿ ಸಾರಿಗೆ ಹಬ್ ಸ್ಥಾಪಿಸಲು ಹೆಬ್ಬಾಳದ ಬಳಿ ಕೇಳಿದ್ದ 45 ಎಕರೆ ಬದಲು, 9 ಎಕರೆ ಜಾಗ ಮಂಜೂರು ಮಾಡಿರುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. </p>.<p>ಬೆಂಗಳೂರಿನ ಸಂಚಾರ ದಟ್ಟಣೆ, ಭವಿಷ್ಯದ ಸುಗಮ ಸಂಚಾರದ ವ್ಯವಸ್ಥೆಗೆ ಬಹು ಮಾದರಿ ಸಾರಿಗೆ ಹಬ್ ನಿರ್ಮಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ 45 ಎಕರೆ ಜಾಗ ಬೇಕಿದೆ. ಅಗತ್ಯವಿರುವ ಪೂರ್ಣ ಭೂಮಿಯನ್ನು ನಿರಾಕರಿಸುವುದರಿಂದ ಮೂಲಸೌಕರ್ಯ ಯೋಜನೆ ಹಳಿತಪ್ಪುವ ಅಪಾಯವಿದೆ ಎಂದಿದ್ದಾರೆ.</p>.<p>ಸಾರಿಗೆ ಹಬ್ ಸ್ಥಗಿತವಾದರೆ ಸಂಚಾರ ದಟ್ಟಣೆಗೆ ಜನರು ಪರಿತಪಿಸಬೇಕಾಗುತ್ತದೆ. ಬೆಂಗಳೂರಿನ ಬೆಳವಣಿಗೆಯನ್ನು ಕುಂಠಿತಗೊಳಿಸುವ ಅಪಾಯವಿದೆ. ಸ್ಥಾಪಿತ ಲಾಬಿಗಳ ಒತ್ತಡಕ್ಕಿಂತ ಸಾರ್ವಜನಿಕ ಹಿತಾಸಕ್ತಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಶ್ವದರ್ಜೆಯ ಬಹುಮಾದರಿ ಸಾರಿಗೆ ಹಬ್ ಸ್ಥಾಪಿಸಲು ಹೆಬ್ಬಾಳದ ಬಳಿ ಕೇಳಿದ್ದ 45 ಎಕರೆ ಬದಲು, 9 ಎಕರೆ ಜಾಗ ಮಂಜೂರು ಮಾಡಿರುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. </p>.<p>ಬೆಂಗಳೂರಿನ ಸಂಚಾರ ದಟ್ಟಣೆ, ಭವಿಷ್ಯದ ಸುಗಮ ಸಂಚಾರದ ವ್ಯವಸ್ಥೆಗೆ ಬಹು ಮಾದರಿ ಸಾರಿಗೆ ಹಬ್ ನಿರ್ಮಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ 45 ಎಕರೆ ಜಾಗ ಬೇಕಿದೆ. ಅಗತ್ಯವಿರುವ ಪೂರ್ಣ ಭೂಮಿಯನ್ನು ನಿರಾಕರಿಸುವುದರಿಂದ ಮೂಲಸೌಕರ್ಯ ಯೋಜನೆ ಹಳಿತಪ್ಪುವ ಅಪಾಯವಿದೆ ಎಂದಿದ್ದಾರೆ.</p>.<p>ಸಾರಿಗೆ ಹಬ್ ಸ್ಥಗಿತವಾದರೆ ಸಂಚಾರ ದಟ್ಟಣೆಗೆ ಜನರು ಪರಿತಪಿಸಬೇಕಾಗುತ್ತದೆ. ಬೆಂಗಳೂರಿನ ಬೆಳವಣಿಗೆಯನ್ನು ಕುಂಠಿತಗೊಳಿಸುವ ಅಪಾಯವಿದೆ. ಸ್ಥಾಪಿತ ಲಾಬಿಗಳ ಒತ್ತಡಕ್ಕಿಂತ ಸಾರ್ವಜನಿಕ ಹಿತಾಸಕ್ತಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>