<p><strong>ಬೆಳಗಾವಿ: </strong>‘ಜೊತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗುತ್ತೀರಾ?’ ಎಂದು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರು ಹಾಗೂ ಅಧಕಾರಿಗಳ ಸಮ್ಮುಖದಲ್ಲಿ ಪ್ರಶ್ನಿಸಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಭಾನುವಾರ ನಡೆಯಿತು.</p>.<p>ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಹುಬ್ಬಳ್ಳಿಗೂ ಅವರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಸಿಗದಿದ್ದುದ್ದಕ್ಕೆ ಸಿಟ್ಟಾಗಿದ್ದರು. ಪೊಲೀಸರಿಂದ ಗೌರವವಂದನೆ ಸ್ವೀಕರಿಸುವ ವೇಳೆ ನಡೆದ ಘಟನೆಯಿಂದ ಮುಖ್ಯಮಂತ್ರಿ ಮುಜುಗರಕ್ಕೆ ಒಳಗಾಗಬೇಕಾಯಿತು.</p>.<p>ತಮ್ಮೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡು ಹೋಗುವ ಇರಾದೆ ಮುಖ್ಯಮಂತ್ರಿಯದಾಗಿತ್ತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ‘ನನ್ನ ಬದಲು ನೀವೇ ವಿಮಾನದಲ್ಲಿ ಹೋಗಿ’ ಎಂದು ತಿಳಿಸಿದ ಪ್ರಸಂಗವೂ ನಡಯಿತು.</p>.<p>ಕೊನೆಗೆ ಪರಿಷತ್ ಸದಸ್ಯರವಿಕುಮಾರ್ ಬೇರೊಂದು ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿಯೊಂದಿಗೆ ಶೋಭಾ, ಬೊಮ್ಮಾಯಿ ಹುಬ್ಬಳ್ಳಿಗೆ ಪ್ರಯಾಣಿಸಿದರು. ಬೆಂಗಳೂರಿನಿಂದ ಬರುವಾಗ ರವಿಕುಮಾರ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಜೊತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗುತ್ತೀರಾ?’ ಎಂದು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರು ಹಾಗೂ ಅಧಕಾರಿಗಳ ಸಮ್ಮುಖದಲ್ಲಿ ಪ್ರಶ್ನಿಸಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಭಾನುವಾರ ನಡೆಯಿತು.</p>.<p>ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಹುಬ್ಬಳ್ಳಿಗೂ ಅವರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಸಿಗದಿದ್ದುದ್ದಕ್ಕೆ ಸಿಟ್ಟಾಗಿದ್ದರು. ಪೊಲೀಸರಿಂದ ಗೌರವವಂದನೆ ಸ್ವೀಕರಿಸುವ ವೇಳೆ ನಡೆದ ಘಟನೆಯಿಂದ ಮುಖ್ಯಮಂತ್ರಿ ಮುಜುಗರಕ್ಕೆ ಒಳಗಾಗಬೇಕಾಯಿತು.</p>.<p>ತಮ್ಮೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡು ಹೋಗುವ ಇರಾದೆ ಮುಖ್ಯಮಂತ್ರಿಯದಾಗಿತ್ತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ‘ನನ್ನ ಬದಲು ನೀವೇ ವಿಮಾನದಲ್ಲಿ ಹೋಗಿ’ ಎಂದು ತಿಳಿಸಿದ ಪ್ರಸಂಗವೂ ನಡಯಿತು.</p>.<p>ಕೊನೆಗೆ ಪರಿಷತ್ ಸದಸ್ಯರವಿಕುಮಾರ್ ಬೇರೊಂದು ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿಯೊಂದಿಗೆ ಶೋಭಾ, ಬೊಮ್ಮಾಯಿ ಹುಬ್ಬಳ್ಳಿಗೆ ಪ್ರಯಾಣಿಸಿದರು. ಬೆಂಗಳೂರಿನಿಂದ ಬರುವಾಗ ರವಿಕುಮಾರ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>