ಮುಖ್ಯಮಂತ್ರಿಯವರು ಈಗಾಗಲೇ ಭರವಸೆ ನೀಡಿರುವಂತೆ ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್, ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತ. ಅಲ್ಲದೆ, ಉಮೇಶ ಕತ್ತಿ, ರಾಜೂಗೌಡ, ಸಿ.ಪಿ.ಯೋಗೇಶ್ವರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಅರವಿಂದ ಲಿಂಬಾವಳಿ ಅವರ ಹೆಸರು ವರಿಷ್ಠರ ಪರಿಶೀಲನೆಯಲ್ಲಿದೆ. ವರಿಷ್ಠರು ಹಸಿರು ನಿಶಾನೆ ನೀಡಿದರೆ ಪಟ್ಟಿಯಿಂದ ಒಬ್ಬರನ್ನು ಕೈಬಿಟ್ಟು ಲಿಂಬಾವಳಿಗೆ ಅವಕಾಶ ಸಿಗಬಹುದು ಎಂದು ಮೂಲಗಳು ತಿಳಿಸಿವೆ.