<p><strong>ಬೆಂಗಳೂರು:</strong> ಕೋವಿಡ್ ಪ್ರಕರಣ ತಗ್ಗಿಸಲು ಹಗಲಿರುಳು ಶ್ರಮಿಸಿ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರವನ್ನು ಕೊಂಡಾಡಿದರು.</p>.<p>ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,‘ಸಾಂಕ್ರಾಮಿಕ ರೋಗದ ಈ ಬಿಕ್ಕಟ್ಟು ನಮ್ಮ ಸಾಮರ್ಥ್ಯ ವೃದ್ಧಿಸುವ ಮತ್ತು ಹೆಚ್ಚುವರಿ ಆರೋಗ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಳ್ಳಲು ಸಹಕಾರಿಯಾಗಿದೆ. ಆಮ್ಲಜನಕ ಸಿಲಿಂಡರ್ ಮತ್ತು ವೆಂಟಿಲೇಟರ್ಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಯ ಶ್ರಮ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡಿದ್ದರಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.</p>.<p>ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಸಂದರ್ಭದಲ್ಲಿ 11,82,307 ಲಕ್ಷ ಕಾರ್ಮಿಕರಿಗೆ ತಲಾ ₹2 ಸಾವಿರದಂತೆ ₹236.46 ಕೋಟಿ ಪಾವತಿಸಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯು 14,527 ಸಂಘಟಿತ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ₹628.16 ಕೋಟಿ ವಿತರಿಸಲಾಗಿದೆ ಎಂದು ಹೇಳಿದರು.</p>.<p>ಜಲಾನಯನ ಅಭಿವೃದ್ದಿಗೆ ಸರ್ಕಾರ ಗಮನ ಹರಿಸಿದೆ. ಮೊಬೈಲ್ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆಗೆ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ 14 ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕರ್ನಾಟಕವು ಸಹಕಾರಿ ಕ್ಷೇತ್ರದಲ್ಲಿ ಹಾಲು ಉತ್ಪಾದನೆಯಲ್ಲಿ ಭಾರತದಲ್ಲಿಯೇ 2ನೇ ಸ್ಥಾನ, ಮೊಟ್ಟೆ ಉತ್ಪಾದನೆಯಲ್ಲಿ 6ನೇ ಸ್ಥಾನ ಹಾಗೂ ಮಾಂಸ ಉತ್ಪಾದನೆಯಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಸ್ಮಾರ್ಟ್ಸಿಟಿ ಯೋಜನೆಯಡಿ 158.27 ಕಿಲೋ ಮೀಟರ್ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ 83.91 ಕಿ.ಮೀ ಕಾಮಗಾರಿ ಪೂರ್ಣಗೊಡಿದೆ ಎಂದು ಹೇಳಿದರು.</p>.<p><strong>‘ಹಕ್ಕು, ಕರ್ತವ್ಯ ಜೊತೆಯಾಗಿ ಹೋಗಬೇಕು’</strong></p>.<p>‘ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು. ಇಂದಿನ ಯುವ ಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆ ಸಂಪಾದಿಸುವ ರೀತಿಯಲ್ಲಿ ಕರ್ತವ್ಯಗಳನ್ನು ನಾವು ನಿಭಾಯಿಸಬೇಕು. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪ್ರಕರಣ ತಗ್ಗಿಸಲು ಹಗಲಿರುಳು ಶ್ರಮಿಸಿ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರವನ್ನು ಕೊಂಡಾಡಿದರು.</p>.<p>ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,‘ಸಾಂಕ್ರಾಮಿಕ ರೋಗದ ಈ ಬಿಕ್ಕಟ್ಟು ನಮ್ಮ ಸಾಮರ್ಥ್ಯ ವೃದ್ಧಿಸುವ ಮತ್ತು ಹೆಚ್ಚುವರಿ ಆರೋಗ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಳ್ಳಲು ಸಹಕಾರಿಯಾಗಿದೆ. ಆಮ್ಲಜನಕ ಸಿಲಿಂಡರ್ ಮತ್ತು ವೆಂಟಿಲೇಟರ್ಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಯ ಶ್ರಮ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡಿದ್ದರಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.</p>.<p>ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಸಂದರ್ಭದಲ್ಲಿ 11,82,307 ಲಕ್ಷ ಕಾರ್ಮಿಕರಿಗೆ ತಲಾ ₹2 ಸಾವಿರದಂತೆ ₹236.46 ಕೋಟಿ ಪಾವತಿಸಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯು 14,527 ಸಂಘಟಿತ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ₹628.16 ಕೋಟಿ ವಿತರಿಸಲಾಗಿದೆ ಎಂದು ಹೇಳಿದರು.</p>.<p>ಜಲಾನಯನ ಅಭಿವೃದ್ದಿಗೆ ಸರ್ಕಾರ ಗಮನ ಹರಿಸಿದೆ. ಮೊಬೈಲ್ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆಗೆ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ 14 ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕರ್ನಾಟಕವು ಸಹಕಾರಿ ಕ್ಷೇತ್ರದಲ್ಲಿ ಹಾಲು ಉತ್ಪಾದನೆಯಲ್ಲಿ ಭಾರತದಲ್ಲಿಯೇ 2ನೇ ಸ್ಥಾನ, ಮೊಟ್ಟೆ ಉತ್ಪಾದನೆಯಲ್ಲಿ 6ನೇ ಸ್ಥಾನ ಹಾಗೂ ಮಾಂಸ ಉತ್ಪಾದನೆಯಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಸ್ಮಾರ್ಟ್ಸಿಟಿ ಯೋಜನೆಯಡಿ 158.27 ಕಿಲೋ ಮೀಟರ್ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ 83.91 ಕಿ.ಮೀ ಕಾಮಗಾರಿ ಪೂರ್ಣಗೊಡಿದೆ ಎಂದು ಹೇಳಿದರು.</p>.<p><strong>‘ಹಕ್ಕು, ಕರ್ತವ್ಯ ಜೊತೆಯಾಗಿ ಹೋಗಬೇಕು’</strong></p>.<p>‘ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು. ಇಂದಿನ ಯುವ ಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆ ಸಂಪಾದಿಸುವ ರೀತಿಯಲ್ಲಿ ಕರ್ತವ್ಯಗಳನ್ನು ನಾವು ನಿಭಾಯಿಸಬೇಕು. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>