ಸ್ವಾಮೀಜಿಯವರಿಗೆ ಚಿಕಿತ್ಸೆ ನೀಡುತ್ತಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯ ಡಾ.ರವೀಂದ್ರ ಮಾತನಾಡಿ, ‘ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಈಗಾಗಲೇ ರೋಗ ನಿರೋಧಕ (ಆ್ಯಂಟಿ ಬಯೊಟಿಕ್ಸ್) ಔಷಧಿ ನೀಡಲಾಗಿದೆ. ಪದೇ ಪದೇ ಈ ರೀತಿ ಕಾಣಿಸಿಕೊಳ್ಳುವ ಸೋಂಕಿನಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ. ಅದಕ್ಕಾಗಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಚಿಕಿತ್ಸೆ ಅನಿವಾರ್ಯ’ ಎಂದು ಹೇಳಿದರು.