<p><strong>ತುಮಕೂರು:</strong> ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 7ನೇ ಪುಣ್ಯ ಸಂಸ್ಮರಣೋತ್ಸವ ಬುಧವಾರ (ಜ.21) ನಡೆಯಲಿದ್ದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ. </p>.<p>ಬೆಳಗ್ಗೆ 11 ಗಂಟೆಗೆ ಪುಣ್ಯ ಸ್ಮರಣೋತ್ಸವ ಆರಂಭವಾಗಲಿದೆ. ಉಪರಾಷ್ಟ್ರಪತಿ ಸುಮಾರು ಒಂದು ತಾಸು ಮಠದಲ್ಲಿ ಕಳೆಯಲಿದ್ದಾರೆ. </p>.<p>ಸಂಸ್ಮರಣೋತ್ಸವಕ್ಕೆ ಮಠದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಡಿನ ವಿವಿಧೆಯಿಂದ ಬರುವ ಸಾವಿರಾರು ಭಕ್ತರಿಗೆ ಬೆಳಗ್ಗೆಯಿಂದ ರಾತ್ರಿವರೆಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.</p>.<p>ಬುಧವಾರ ಬೆಳಗಿನ ಜಾವ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಮಹಾರುದ್ರಭಿಷೇಕದ ಮೂಲಕ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಇಡೀ ದಿನ ಧಾರ್ಮಿಕ ಕಾರ್ಯಗಳು ನೆರವೇರಲಿದ್ದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಗುರುವಿಗೆ ನಮಿಸುವ ಮೂಲಕ ಶಿವಕುಮಾರ ಸ್ವಾಮೀಜಿಯನ್ನು ಸ್ಮರಿಸಲಿದ್ದಾರೆ.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್, ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೇರಿಯನ್ ಮಿಷನ್ ಸಂಸ್ಥಾಪಕ ಮಧುಸೂದನ ಸಾಯಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಚಿವ ಜಿ.ಪರಮೇಶ್ವರ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 7ನೇ ಪುಣ್ಯ ಸಂಸ್ಮರಣೋತ್ಸವ ಬುಧವಾರ (ಜ.21) ನಡೆಯಲಿದ್ದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ. </p>.<p>ಬೆಳಗ್ಗೆ 11 ಗಂಟೆಗೆ ಪುಣ್ಯ ಸ್ಮರಣೋತ್ಸವ ಆರಂಭವಾಗಲಿದೆ. ಉಪರಾಷ್ಟ್ರಪತಿ ಸುಮಾರು ಒಂದು ತಾಸು ಮಠದಲ್ಲಿ ಕಳೆಯಲಿದ್ದಾರೆ. </p>.<p>ಸಂಸ್ಮರಣೋತ್ಸವಕ್ಕೆ ಮಠದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಡಿನ ವಿವಿಧೆಯಿಂದ ಬರುವ ಸಾವಿರಾರು ಭಕ್ತರಿಗೆ ಬೆಳಗ್ಗೆಯಿಂದ ರಾತ್ರಿವರೆಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.</p>.<p>ಬುಧವಾರ ಬೆಳಗಿನ ಜಾವ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಮಹಾರುದ್ರಭಿಷೇಕದ ಮೂಲಕ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಇಡೀ ದಿನ ಧಾರ್ಮಿಕ ಕಾರ್ಯಗಳು ನೆರವೇರಲಿದ್ದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಗುರುವಿಗೆ ನಮಿಸುವ ಮೂಲಕ ಶಿವಕುಮಾರ ಸ್ವಾಮೀಜಿಯನ್ನು ಸ್ಮರಿಸಲಿದ್ದಾರೆ.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್, ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೇರಿಯನ್ ಮಿಷನ್ ಸಂಸ್ಥಾಪಕ ಮಧುಸೂದನ ಸಾಯಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಚಿವ ಜಿ.ಪರಮೇಶ್ವರ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>