ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧ | ಸಚಿವರ ಕೊಠಡಿಯಿಂದ ಸಿದ್ಧಗಂಗಾ ಸ್ವಾಮೀಜಿ ಫೋಟೊ ಹೊರಕ್ಕೆ: ಬಿಜೆಪಿ ಆಕ್ರೋಶ

Published 1 ಜೂನ್ 2023, 23:21 IST
Last Updated 1 ಜೂನ್ 2023, 23:21 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಚಿವರಾದ ಕೆ.ಎಚ್‌. ಮುನಿಯಪ್ಪ ಹಾಗೂ ಕೆ.ಎನ್‌. ರಾಜಣ್ಣ ಅವರ ಕೊಠಡಿಯಿಂದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಿದ್ಧಗಂಗಾ ಸ್ವಾಮೀಜಿ ಅವರ ಚಿತ್ರಗಳನ್ನು ಹೊರಗೆ ಹಾಕಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರ ಚಿತ್ರಗಳ ಜೊತೆಗೆ ಶಿವಕುಮಾರ ಸ್ವಾಮೀಜಿ ಅವರ ಚಿತ್ರವನ್ನೂ ಹೊರ ಹಾಕಲಾಗಿದೆ ಎಂದು ಬಿಜೆಪಿ ಮಾಡಿರುವ ಟ್ವೀಟ್‌ನಲ್ಲಿ ಆರೋಪಿಸಲಾಗಿದೆ.

ಕೊಠಡಿಗಳನ್ನು ಸ್ವಚ್ಛ ಮಾಡುವ ಸಂದರ್ಭದಲ್ಲಿ ಚಿತ್ರಗಳನ್ನು ಹೊರಗಿರಿಸಲಾಗಿತ್ತು ಎಂದು ಸಚಿವರ ಕಚೇರಿಯ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT