<p><strong>ಬೆಂಗಳೂರು</strong>:‘2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ.<p>‘ನ್ಯೂಸ್ 18’ ಕನ್ನಡ ಸುದ್ದಿವಾಹಿನಿ ಆಯೋಜಿಸಿದ್ದ ‘ರೈಸಿಂಗ್ ಕರ್ನಾಟಕ’ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ‘ಹಿಂದೆ ನಾನು 2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದೆ’ ಎಂದರು.</p>.<p>‘ಆದರೆ ಈಗ, 2028ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧೆ ಮಾಡಲೇಬೇಕು ಎಂದು ನನ್ನ ಸ್ನೇಹಿತರು, ಬೆಂಬಲಿಗರು ಹೇಳುತ್ತಿದ್ದಾರೆ. ನೀವು ಸ್ಪರ್ಧಿಸಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆ. ಅಧಿಕಾರಕ್ಕೆ ಬರಲು ಅನುಕೂಲವಾಗುತ್ತದೆ ಎಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಇದರ ಬಗ್ಗೆ ಇನ್ನೂ ಗಂಭೀರವಾಗಿ ಯೋಚಿಸಿಲ್ಲ’ ಎಂದಿದ್ದಾರೆ.</p>.<p>‘ಐದು ವರ್ಷ ಇರಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ನವರ ತೀರ್ಮಾನ ಅಂತಿಮ’ ಎಂದೂ ಸಿದ್ದರಾಮಯ್ಯ ಹೇಳಿದರು.</p>.<p>‘ಸಂಪುಟ ಪುನರ್ ರಚನೆ ಮಾಡಿ, ಹೊಸಬರಿಗೆ ಅವಕಾಶ ಕೊಡಿ ಎಂದು ಹೈಕಮಾಂಡ್ನವರು 3– 4 ತಿಂಗಳ ಹಿಂದೆಯೇ ಹೇಳಿದ್ದಾರೆ. ಆಗ ನಾನು ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿ ಎಂದು ಹೇಳಿದ್ದೆ. ಈಗ ಹೈಕಮಾಂಡ್ನವರು ಒಪ್ಪಿಗೆ ಕೊಟ್ಟರೆ ಸಂಪುಟ ಪುನರ್ ರಚನೆ ಮಾಡುತ್ತೇನೆ’ ಎಂದರು. </p>.<p>‘ಜನಾಶೀರ್ವಾದ ಎಲ್ಲಿಯವರೆಗೆ ಇರುತ್ತೊ ಅಲ್ಲಿವರೆಗೆ ನಾನು ಅಧಿಕಾರದಲ್ಲಿರುತ್ತೇನೆ. ಯಾವುದೇ ದಾಖಲೆಯ (ದೇವರಾಜ ಅರಸು ಅವರ ದಾಖಲೆ) ಮೇಲೆ ನಂಬಿಕೆ ಇಲ್ಲ. ಜನರ ಕಷ್ಟಗಳು, ಕಾರ್ಪಣ್ಯಗಳಿಗೆ ನೆರವಾಗುವುದು ಮುಖ್ಯ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:‘2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ.<p>‘ನ್ಯೂಸ್ 18’ ಕನ್ನಡ ಸುದ್ದಿವಾಹಿನಿ ಆಯೋಜಿಸಿದ್ದ ‘ರೈಸಿಂಗ್ ಕರ್ನಾಟಕ’ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ‘ಹಿಂದೆ ನಾನು 2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದೆ’ ಎಂದರು.</p>.<p>‘ಆದರೆ ಈಗ, 2028ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧೆ ಮಾಡಲೇಬೇಕು ಎಂದು ನನ್ನ ಸ್ನೇಹಿತರು, ಬೆಂಬಲಿಗರು ಹೇಳುತ್ತಿದ್ದಾರೆ. ನೀವು ಸ್ಪರ್ಧಿಸಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆ. ಅಧಿಕಾರಕ್ಕೆ ಬರಲು ಅನುಕೂಲವಾಗುತ್ತದೆ ಎಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಇದರ ಬಗ್ಗೆ ಇನ್ನೂ ಗಂಭೀರವಾಗಿ ಯೋಚಿಸಿಲ್ಲ’ ಎಂದಿದ್ದಾರೆ.</p>.<p>‘ಐದು ವರ್ಷ ಇರಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ನವರ ತೀರ್ಮಾನ ಅಂತಿಮ’ ಎಂದೂ ಸಿದ್ದರಾಮಯ್ಯ ಹೇಳಿದರು.</p>.<p>‘ಸಂಪುಟ ಪುನರ್ ರಚನೆ ಮಾಡಿ, ಹೊಸಬರಿಗೆ ಅವಕಾಶ ಕೊಡಿ ಎಂದು ಹೈಕಮಾಂಡ್ನವರು 3– 4 ತಿಂಗಳ ಹಿಂದೆಯೇ ಹೇಳಿದ್ದಾರೆ. ಆಗ ನಾನು ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿ ಎಂದು ಹೇಳಿದ್ದೆ. ಈಗ ಹೈಕಮಾಂಡ್ನವರು ಒಪ್ಪಿಗೆ ಕೊಟ್ಟರೆ ಸಂಪುಟ ಪುನರ್ ರಚನೆ ಮಾಡುತ್ತೇನೆ’ ಎಂದರು. </p>.<p>‘ಜನಾಶೀರ್ವಾದ ಎಲ್ಲಿಯವರೆಗೆ ಇರುತ್ತೊ ಅಲ್ಲಿವರೆಗೆ ನಾನು ಅಧಿಕಾರದಲ್ಲಿರುತ್ತೇನೆ. ಯಾವುದೇ ದಾಖಲೆಯ (ದೇವರಾಜ ಅರಸು ಅವರ ದಾಖಲೆ) ಮೇಲೆ ನಂಬಿಕೆ ಇಲ್ಲ. ಜನರ ಕಷ್ಟಗಳು, ಕಾರ್ಪಣ್ಯಗಳಿಗೆ ನೆರವಾಗುವುದು ಮುಖ್ಯ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>