ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸಿದ್ದರಾಮಯ್ಯ ರಾವಣಾಸುರ'; ಶ್ರೀರಾಮುಲು

Last Updated 29 ಜನವರಿ 2019, 7:55 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಂಸ್ಕಾರ ಇಲ್ಲದ ವ್ಯಕ್ತಿ. ರವಣಾಸುರನಲ್ಲಿ ಇರುವ ಎಲ್ಲ ಗುಣಗಳೂ ಅವರಲ್ಲಿವೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಹಿಳೆಯರ ಮೇಲೆ ಗೌರವ ಇಲ್ಲ. ಪ್ರಾಮಾಣಿಕ ನಡವಳಿಕೆ ಕೂಡ ಅವರಲ್ಲಿ ಇಲ್ಲ ಎಂಬುದು ಹತ್ತಿರದಿಂದ ನೋಡಿದ ಎಲ್ಲರಿಗೂ ಗೊತ್ತು. ಅವರ ನಡವಳಿಕೆ ಯಾರಿಗೂ ಇಷ್ಟವಾಗಲ್ಲ ಎಂದು ಕಿಡಿ ಕಾರಿದರು.

ಸಮ್ಮಿಶ್ರ ಸರ್ಕಾರದ ಕೊನೆ ದಿನಗಳನ್ನು ನಾವು ನೋಡುತ್ತಿದ್ದೇವೆ. ಸರ್ಕಾರ ಅಳಿವಿನಂಚಿನಲ್ಲಿದ್ದು, ಕುಮಾರಸ್ವಾಮಿ ಎಲ್ಲರಿಗೂ ಮುಖ್ಯಮಂತ್ರಿ ಆಗಿಲ್ಲ. ಕಾಂಗ್ರೆಸ್‌ಗೆ ಈವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾರೆ. ಲಂಚ ಹಾಗೂ ಕಮಿಷನ್ ಹಣಕ್ಕೆ ಎರಡೂ ಪಕ್ಷಗಳು ಕಚ್ಚಾಡುತ್ತಿವೆ ಎಂದು ಆರೋಪಿಸಿದರು.

ಕಂಪ್ಲಿ ಶಾಸಕ ಗಣೇಶ್ ಹಾಗೂ ವಿಜಯನಗರ ಶಾಸಕ ಆನಂದ್ ಸಿಂಗ್ ನಡುವಿನ ಗಲಾಟೆಯಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳುತ್ತಿಲ್ಲ. ಅವರು ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ಬಿಜೆಪಿ ಯಾರನ್ನು ರಕ್ಷಿಸುತ್ತಿಲ್ಲ, ಯಾವ ಶಾಸಕರನ್ನು ಸೆಳೆದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT