<p><strong>ಬೆಳಗಾವಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಗುರುವಾರ ದೂರು ನೀಡಿದರು. </p>.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.<p>ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಏ.28ರಂದು ನಗರದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿತ್ತು. ಭದ್ರತೆಗೆ ಧಾರವಾಡದ ಎಎಸ್ಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುವಾಗ, ಬಿಜೆಪಿ ಕಾರ್ಯಕರ್ತೆಯರು ನುಗ್ಗಿ ಪ್ರತಿಭಟಿಸಿದರು. ಗದ್ದಲ ಎಬ್ಬಿಸಿದರು. ಇದರಿಂದ ಕೋಪಗೊಂಡ ಸಿ.ಎಂ ಸ್ಥಳದಲ್ಲಿದ್ದ ನಾರಾಯಣ ಭರಮನಿ ಅವರ ಮೇಲೆ ಕೋಪಗೊಂಡು ಹೊಡೆಯಲು ಮುಂದಾದರು.</p>.ತೋತಾಪುರಿ ಮಾವು ಮೇಲಿನ ನಿಷೇಧ ರದ್ದು ಕೋರಿ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ.<p>'ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಾಡಿನ ಸಮಸ್ತ ಚಿಂತನೆ- ಮಂಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯ ನಿರತ ಅಧಿಕಾರಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ 'ಪೋಲಿಸ್ ಸಮವಸ್ತ್ರದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥೆರ್ಯವನ್ನು ಕುಗ್ಗಿಸುವಂಥ ಕೆಲಸ ಮಾಡಿದ್ದಾರೆ. ಶಾಸಕಾಂಗದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಈ ನಡೆಯು ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p><p>ಕಾನೂನು ಸಚಿವ ಸೇರಿದಂತೆ ಹಲವಾರು ಸಚಿವರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿಯೇ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಹೀಗೆ ನಡೆದುಕೊಂಡಿರುವುದು, ರಾಜ್ಯದ ಇತರ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಗಳೆಲ್ಲರೂ ಭಯ ಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ಘಟನೆಗೆ ಸಂಬಂಧಿಸಿದಂತೆ ಲಭ್ಯವಿರುವ ವಿಡಿಯೊ ದೃಶ್ಯಾವಳಿಗಳ ಸಿ.ಡಿ ಮತ್ತು ಪತ್ರಿಕಾ ವರದಿಗಳನ್ನು ಸಹ ಲಗತ್ತಿಸಿದ್ದು, 'ಭಾರತೀಯ ನ್ಯಾಯ ಸಂಹಿತೆ-2023' ಕಲಂ 132ರ ಅಡಿಯಲ್ಲಿ ಸಿದ್ದರಾಮಯ್ಯ ಅವರ ಮೇಲೆ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ.</p>.ಆರ್ಸಿಬಿ ವಿಜಯೋತ್ಸವ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ: ಕುಮಾರಸ್ವಾಮಿ.<h2>ಕಾಯ್ದೆಯಲ್ಲಿದೆ 2 ವರ್ಷ ಜೈಲು </h2><p>ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 132ರ ಪ್ರಕಾರ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವಾಗ ಅಥವಾ ಆ ವ್ಯಕ್ತಿಯು ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವುದನ್ನು ತಡೆಯುವ ಉದ್ದೇಶದಿಂದ ಅಥವಾ ಅಂಥ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ಕಾನೂನು ಬದ್ದವಾಗಿ ನಿರ್ವಹಿಸುವಾಗ, ವ್ಯಕ್ತಿಯ ಮೇಲೆ ಹಲ್ಲೆ ನಡೆಸುವ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ವರೆಗೆ ಯಾವುದೇ ರೀತಿಯ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.</p> .ಹಿರಿಯ ಐಎಎಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಗುರುವಾರ ದೂರು ನೀಡಿದರು. </p>.ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!.<p>ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಏ.28ರಂದು ನಗರದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿತ್ತು. ಭದ್ರತೆಗೆ ಧಾರವಾಡದ ಎಎಸ್ಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುವಾಗ, ಬಿಜೆಪಿ ಕಾರ್ಯಕರ್ತೆಯರು ನುಗ್ಗಿ ಪ್ರತಿಭಟಿಸಿದರು. ಗದ್ದಲ ಎಬ್ಬಿಸಿದರು. ಇದರಿಂದ ಕೋಪಗೊಂಡ ಸಿ.ಎಂ ಸ್ಥಳದಲ್ಲಿದ್ದ ನಾರಾಯಣ ಭರಮನಿ ಅವರ ಮೇಲೆ ಕೋಪಗೊಂಡು ಹೊಡೆಯಲು ಮುಂದಾದರು.</p>.ತೋತಾಪುರಿ ಮಾವು ಮೇಲಿನ ನಿಷೇಧ ರದ್ದು ಕೋರಿ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ.<p>'ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಾಡಿನ ಸಮಸ್ತ ಚಿಂತನೆ- ಮಂಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯ ನಿರತ ಅಧಿಕಾರಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ 'ಪೋಲಿಸ್ ಸಮವಸ್ತ್ರದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥೆರ್ಯವನ್ನು ಕುಗ್ಗಿಸುವಂಥ ಕೆಲಸ ಮಾಡಿದ್ದಾರೆ. ಶಾಸಕಾಂಗದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಈ ನಡೆಯು ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p><p>ಕಾನೂನು ಸಚಿವ ಸೇರಿದಂತೆ ಹಲವಾರು ಸಚಿವರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿಯೇ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಹೀಗೆ ನಡೆದುಕೊಂಡಿರುವುದು, ರಾಜ್ಯದ ಇತರ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಗಳೆಲ್ಲರೂ ಭಯ ಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ಘಟನೆಗೆ ಸಂಬಂಧಿಸಿದಂತೆ ಲಭ್ಯವಿರುವ ವಿಡಿಯೊ ದೃಶ್ಯಾವಳಿಗಳ ಸಿ.ಡಿ ಮತ್ತು ಪತ್ರಿಕಾ ವರದಿಗಳನ್ನು ಸಹ ಲಗತ್ತಿಸಿದ್ದು, 'ಭಾರತೀಯ ನ್ಯಾಯ ಸಂಹಿತೆ-2023' ಕಲಂ 132ರ ಅಡಿಯಲ್ಲಿ ಸಿದ್ದರಾಮಯ್ಯ ಅವರ ಮೇಲೆ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ.</p>.ಆರ್ಸಿಬಿ ವಿಜಯೋತ್ಸವ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ: ಕುಮಾರಸ್ವಾಮಿ.<h2>ಕಾಯ್ದೆಯಲ್ಲಿದೆ 2 ವರ್ಷ ಜೈಲು </h2><p>ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 132ರ ಪ್ರಕಾರ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವಾಗ ಅಥವಾ ಆ ವ್ಯಕ್ತಿಯು ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ನಿರ್ವಹಿಸುವುದನ್ನು ತಡೆಯುವ ಉದ್ದೇಶದಿಂದ ಅಥವಾ ಅಂಥ ಸಾರ್ವಜನಿಕ ಸೇವಕನಾಗಿ ತನ್ನ ಕರ್ತವ್ಯವನ್ನು ಕಾನೂನು ಬದ್ದವಾಗಿ ನಿರ್ವಹಿಸುವಾಗ, ವ್ಯಕ್ತಿಯ ಮೇಲೆ ಹಲ್ಲೆ ನಡೆಸುವ ಅಥವಾ ಬಲ ಪ್ರಯೋಗ ಮಾಡುವ ಯಾವುದೇ ವ್ಯಕ್ತಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ವರೆಗೆ ಯಾವುದೇ ರೀತಿಯ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.</p> .ಹಿರಿಯ ಐಎಎಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>