<p>ಬಾಗಲಕೋಟೆ: ‘ಸಿದ್ದರಾಮಯ್ಯ ಜಾತಿವಾದಿಯಲ್ಲ. ಬಡವರ ಪರ ಇರುವ ಅವರಿಗೆ ಜಾತಿ ವ್ಯಾಮೋಹ ಇಲ್ಲ. ಬಸವಣ್ಣನ ಅನುಯಾಯಿ ಎಂದು ಹಲವು ಬಾರಿ ಹೇಳಿದ್ದಾರೆ. ತಾವು ಬಸವಣ್ಣನ ಅನುಯಾಯಿ ಎಂದು ಯಡಿಯೂರಪ್ಪ ಹೇಳಲಿ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಸವಾಲು ಹಾಕಿದರು.</p>.<p>‘ಸಿದ್ದರಾಮಯ್ಯ ಜಾತಿವಾದಿ’ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಾಡಿದ ಆರೋಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಮನುಸ್ಮೃತಿಯ ಅನುಯಾಯಿ. ಚುನಾವಣೆಯಲ್ಲಿ ಮತಗಳಿಕೆಗಾಗಿ ಅಪಪ್ರಚಾರ ಮಾಡುವುದನ್ನು ಖಂಡಿಸುತ್ತೇನೆ’ ಎಂದರು.</p>.<p>‘ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಇರುವುದು ಕಡ್ಡಾಯ</p>.<p>ಮಾಡುವುದರ ಜೊತೆಗೆ, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರು. ಕೂಡಲಸಂಗಮ ಅಭಿವೃದ್ಧಿಗೂ ಆದ್ಯತೆ ನೀಡಿದರು. ಯಡಿಯೂರಪ್ಪ ಏನೂ ಮಾಡಲಿಲ್ಲ’ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ಅವರನ್ನು ಸಾಲಗಾರ ಸಾಹುಕಾರ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಿದೆ. ಬೇಕಾದರೆ ಬಾಗಲಕೋಟೆಯಲ್ಲೇ ಬಹಿರಂಗ ಚರ್ಚೆಗೆ ಬರಲಿ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ಶಿಸ್ತು ಉಲ್ಲಂಘಿಸಿಲ್ಲ’ ಎಂದರು.</p>.<p>‘1956ರಿಂದ 2014ರವರೆಗೆ ಭಾರತದ ಸಾಲ 53 ಲಕ್ಷ ಕೋಟಿ ಇತ್ತು. 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ₹165 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದಕ್ಕೆ ನಾಚಿಕೆಯಾಗಬೇಕಲ್ಲವೇ? ಸಾಲದ ಪ್ರಮಾಣ ಜಿಡಿಪಿಯ ಶೇ 56ರಷ್ಟಿದೆ. ವಿತ್ತೀಯ ಕೊರತೆ ಶೇ4.4ರಷ್ಟಿದೆ. ಆರ್ಥಿಕ ಶಿಸ್ತು ಯಾರು ಉಲ್ಲಂಘಿಸಿದ್ದಾರೆ ಎಂದು ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ?’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿ ಪಾಪರ್ ಪಾರ್ಟಿ. ಪಕ್ಷದಿಂದ ಉಚ್ಚಾಟಿಸಲಾದ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಕರೆತಂದು ಬಂದು ಚುನಾವಣೆಗೆ ಪ್ರಚಾರ ಮಾಡಲಾಗುತ್ತಿದೆ. ಎಲ್ಲಿದ ಪಕ್ಷದ ಶಿಸ್ತು? ನಾಚಿಕೆಯಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಬಾಗಲಕೋಟೆಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಜೀವ್ಗಾಂಧಿ ವಿಶ್ವವಿದ್ಯಾಲಯದಲ್ಲಿನ ನಿಧಿಯಿಂದ ತೆಗೆದುಕೊಳ್ಳುತ್ತಿದ್ದೇವೆ. ವಿವಿಯಲ್ಲಿ ₹1,000 ಕೋಟಿ ಇದ್ದು, ರಾಮನಗರ ಹಾಗೂ ಇಲ್ಲಿಗೆ ಅನುದಾನ ನೀಡಲಾಗಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-19-1329029007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಸಿದ್ದರಾಮಯ್ಯ ಜಾತಿವಾದಿಯಲ್ಲ. ಬಡವರ ಪರ ಇರುವ ಅವರಿಗೆ ಜಾತಿ ವ್ಯಾಮೋಹ ಇಲ್ಲ. ಬಸವಣ್ಣನ ಅನುಯಾಯಿ ಎಂದು ಹಲವು ಬಾರಿ ಹೇಳಿದ್ದಾರೆ. ತಾವು ಬಸವಣ್ಣನ ಅನುಯಾಯಿ ಎಂದು ಯಡಿಯೂರಪ್ಪ ಹೇಳಲಿ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಸವಾಲು ಹಾಕಿದರು.</p>.<p>‘ಸಿದ್ದರಾಮಯ್ಯ ಜಾತಿವಾದಿ’ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಾಡಿದ ಆರೋಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಮನುಸ್ಮೃತಿಯ ಅನುಯಾಯಿ. ಚುನಾವಣೆಯಲ್ಲಿ ಮತಗಳಿಕೆಗಾಗಿ ಅಪಪ್ರಚಾರ ಮಾಡುವುದನ್ನು ಖಂಡಿಸುತ್ತೇನೆ’ ಎಂದರು.</p>.<p>‘ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಇರುವುದು ಕಡ್ಡಾಯ</p>.<p>ಮಾಡುವುದರ ಜೊತೆಗೆ, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರು. ಕೂಡಲಸಂಗಮ ಅಭಿವೃದ್ಧಿಗೂ ಆದ್ಯತೆ ನೀಡಿದರು. ಯಡಿಯೂರಪ್ಪ ಏನೂ ಮಾಡಲಿಲ್ಲ’ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ಅವರನ್ನು ಸಾಲಗಾರ ಸಾಹುಕಾರ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಿದೆ. ಬೇಕಾದರೆ ಬಾಗಲಕೋಟೆಯಲ್ಲೇ ಬಹಿರಂಗ ಚರ್ಚೆಗೆ ಬರಲಿ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ಶಿಸ್ತು ಉಲ್ಲಂಘಿಸಿಲ್ಲ’ ಎಂದರು.</p>.<p>‘1956ರಿಂದ 2014ರವರೆಗೆ ಭಾರತದ ಸಾಲ 53 ಲಕ್ಷ ಕೋಟಿ ಇತ್ತು. 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ₹165 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದಕ್ಕೆ ನಾಚಿಕೆಯಾಗಬೇಕಲ್ಲವೇ? ಸಾಲದ ಪ್ರಮಾಣ ಜಿಡಿಪಿಯ ಶೇ 56ರಷ್ಟಿದೆ. ವಿತ್ತೀಯ ಕೊರತೆ ಶೇ4.4ರಷ್ಟಿದೆ. ಆರ್ಥಿಕ ಶಿಸ್ತು ಯಾರು ಉಲ್ಲಂಘಿಸಿದ್ದಾರೆ ಎಂದು ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ?’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿ ಪಾಪರ್ ಪಾರ್ಟಿ. ಪಕ್ಷದಿಂದ ಉಚ್ಚಾಟಿಸಲಾದ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಕರೆತಂದು ಬಂದು ಚುನಾವಣೆಗೆ ಪ್ರಚಾರ ಮಾಡಲಾಗುತ್ತಿದೆ. ಎಲ್ಲಿದ ಪಕ್ಷದ ಶಿಸ್ತು? ನಾಚಿಕೆಯಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಬಾಗಲಕೋಟೆಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಜೀವ್ಗಾಂಧಿ ವಿಶ್ವವಿದ್ಯಾಲಯದಲ್ಲಿನ ನಿಧಿಯಿಂದ ತೆಗೆದುಕೊಳ್ಳುತ್ತಿದ್ದೇವೆ. ವಿವಿಯಲ್ಲಿ ₹1,000 ಕೋಟಿ ಇದ್ದು, ರಾಮನಗರ ಹಾಗೂ ಇಲ್ಲಿಗೆ ಅನುದಾನ ನೀಡಲಾಗಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-19-1329029007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>