<p><strong>ಬೆಂಗಳೂರು</strong>: ಗೋಮಾಂಸ ಭಕ್ಷಣೆಯ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಘಟಕವು ವಾಗ್ದಾಳಿ ನಡೆಸಿದೆ.</p>.<p>ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಅಹಿಂದದ ಸೂತ್ರ ಪಠಿಸುವ ಅಹಿಂದೂ ಲಾಯರ್ ಸಿದ್ದರಾಮಯ್ಯನವರು ಗೋಮಾಂಸ ಭಕ್ಷಣೆಯ ಪರವಾಗಿ ವಾದ ಮಂಡನೆ ಮಾಡಿ ಕಾಂಗ್ರೆಸ್ ಪಕ್ಷದ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ’ ಎಂದು ತಿಳಿಸಿದೆ.</p>.<p>‘ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಪುಂಗುವ ಇವರು ಒಂದು ವಿಶೇಷ ಸಮುದಾಯವನ್ನು ಅಸಾಂವಿಧಾನಿಕ ರೀತಿಯಲ್ಲಿ ಓಲೈಸಿಕೊಂಡು ಬರುತ್ತಿರುವ ಕಾರಣವೇನು ಎಂಬುದನ್ನು ಸ್ಪಷ್ಟ ಪಡಿಸಲೇಬೇಕು’ ಎಂದು ಬಿಜೆಪಿ ಒತ್ತಾಯಿಸಿದೆ.</p>.<p>‘ಹಿಂದುಳಿದ ಹಾಗೂ ದಲಿತ ವರ್ಗದ ಹಿಂದೂ ಸೋದರರೂ ಕೂಡ ಗೋವನ್ನು ಪೂಜಿಸುತ್ತಾರೆ. ಗೋಮಾಂಸ ತಿನ್ನಬೇಕು ಅನ್ನಿಸಿದರೆ ತಿನ್ನುವೆ ಎನ್ನುವ ನೀವು(ಸಿದ್ದರಾಮಯ್ಯ) ಯಾವ ನೈತಿಕ ಮೌಲ್ಯದ ಮೇಲೆ ಕೋಟ್ಯಂತರ ಹಿಂದೂಗಳು ಆಸ್ಥೆಯಿಂದ ನಡೆದುಕೊಳ್ಳುವ ಮಠ ಮಂದಿರಗಳಿಗೆ ಹೋಗಿ ಬರುತ್ತೀರಿ? ಹೀಗೆ ಹಿಂದೂಗಳಿಗೆ ಅವಮಾನ ಮಾಡಿ ಕಡೆಗೆ ಅವರಲ್ಲಿಯೇ ಮತಭಿಕ್ಷೆ ಬೇಡುವುದು ನಾಚಿಕೆಗೇಡು’ ಎಂದು ಬಿಜೆಪಿ ಟ್ವೀಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೋಮಾಂಸ ಭಕ್ಷಣೆಯ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಘಟಕವು ವಾಗ್ದಾಳಿ ನಡೆಸಿದೆ.</p>.<p>ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಅಹಿಂದದ ಸೂತ್ರ ಪಠಿಸುವ ಅಹಿಂದೂ ಲಾಯರ್ ಸಿದ್ದರಾಮಯ್ಯನವರು ಗೋಮಾಂಸ ಭಕ್ಷಣೆಯ ಪರವಾಗಿ ವಾದ ಮಂಡನೆ ಮಾಡಿ ಕಾಂಗ್ರೆಸ್ ಪಕ್ಷದ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ’ ಎಂದು ತಿಳಿಸಿದೆ.</p>.<p>‘ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಪುಂಗುವ ಇವರು ಒಂದು ವಿಶೇಷ ಸಮುದಾಯವನ್ನು ಅಸಾಂವಿಧಾನಿಕ ರೀತಿಯಲ್ಲಿ ಓಲೈಸಿಕೊಂಡು ಬರುತ್ತಿರುವ ಕಾರಣವೇನು ಎಂಬುದನ್ನು ಸ್ಪಷ್ಟ ಪಡಿಸಲೇಬೇಕು’ ಎಂದು ಬಿಜೆಪಿ ಒತ್ತಾಯಿಸಿದೆ.</p>.<p>‘ಹಿಂದುಳಿದ ಹಾಗೂ ದಲಿತ ವರ್ಗದ ಹಿಂದೂ ಸೋದರರೂ ಕೂಡ ಗೋವನ್ನು ಪೂಜಿಸುತ್ತಾರೆ. ಗೋಮಾಂಸ ತಿನ್ನಬೇಕು ಅನ್ನಿಸಿದರೆ ತಿನ್ನುವೆ ಎನ್ನುವ ನೀವು(ಸಿದ್ದರಾಮಯ್ಯ) ಯಾವ ನೈತಿಕ ಮೌಲ್ಯದ ಮೇಲೆ ಕೋಟ್ಯಂತರ ಹಿಂದೂಗಳು ಆಸ್ಥೆಯಿಂದ ನಡೆದುಕೊಳ್ಳುವ ಮಠ ಮಂದಿರಗಳಿಗೆ ಹೋಗಿ ಬರುತ್ತೀರಿ? ಹೀಗೆ ಹಿಂದೂಗಳಿಗೆ ಅವಮಾನ ಮಾಡಿ ಕಡೆಗೆ ಅವರಲ್ಲಿಯೇ ಮತಭಿಕ್ಷೆ ಬೇಡುವುದು ನಾಚಿಕೆಗೇಡು’ ಎಂದು ಬಿಜೆಪಿ ಟ್ವೀಟಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>