<p><strong>ಬೆಂಗಳೂರು:</strong> ‘ಹೈಕಮಾಂಡ್ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಉಪಾಹಾರ ಸಭೆಯಲ್ಲಿ ಅವರು ಆ ವಿಷಯವನ್ನು ನಮ್ಮ ಜೊತೆ ಹಂಚಿಕೊಳ್ಳಬಹುದು’ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇವತ್ತು ನಮ್ಮನ್ನು (ಸಚಿವರನ್ನು) ಅವರು (ಸಿದ್ದರಾಮಯ್ಯ) ಉಪಾಹಾರ ಸಭೆಗೆ ಕರೆದಿದ್ದಾರೆ’ ಎಂದರು.</p><p>‘ಈಗಾಗಲೇ ಹೈಕಮಾಂಡ್ ಜೊತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ಏನು ಮಾತುಕತೆ ಆಗಿದೆ ಎನ್ನುವುದಷ್ಟೆ ಅವರಿಗೆ ಗೊತ್ತಿಲ್ಲ. ಇವತ್ತಿನ ಸಭೆಯಲ್ಲಿ ನಮಗೆ ಮಾಹಿತಿ ಕೊಡಬಹುದು’ ಎಂದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಿರುವ ಉಪಾಹಾರ ಕೂಟಕ್ಕೆ ಸಚಿವರು ಬಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರು ‘ಕಾವೇರಿ’ಗೆ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಾಲಿಗೆ ಎರಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೈಕಮಾಂಡ್ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಉಪಾಹಾರ ಸಭೆಯಲ್ಲಿ ಅವರು ಆ ವಿಷಯವನ್ನು ನಮ್ಮ ಜೊತೆ ಹಂಚಿಕೊಳ್ಳಬಹುದು’ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇವತ್ತು ನಮ್ಮನ್ನು (ಸಚಿವರನ್ನು) ಅವರು (ಸಿದ್ದರಾಮಯ್ಯ) ಉಪಾಹಾರ ಸಭೆಗೆ ಕರೆದಿದ್ದಾರೆ’ ಎಂದರು.</p><p>‘ಈಗಾಗಲೇ ಹೈಕಮಾಂಡ್ ಜೊತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ಏನು ಮಾತುಕತೆ ಆಗಿದೆ ಎನ್ನುವುದಷ್ಟೆ ಅವರಿಗೆ ಗೊತ್ತಿಲ್ಲ. ಇವತ್ತಿನ ಸಭೆಯಲ್ಲಿ ನಮಗೆ ಮಾಹಿತಿ ಕೊಡಬಹುದು’ ಎಂದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಿರುವ ಉಪಾಹಾರ ಕೂಟಕ್ಕೆ ಸಚಿವರು ಬಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರು ‘ಕಾವೇರಿ’ಗೆ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಾಲಿಗೆ ಎರಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>