<p><strong>ಬೆಂಗಳೂರು</strong>: ಪಿಎಸ್ಐ ನೇಮಕಾತಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿರುವ ಶಾಸಕ ಪ್ರಿಯಾಂಕ್ ಖರ್ಗೆ ಬೆನ್ನ ಹಿಂದೆ ಕಾಂಗ್ರೆಸ್ ಪಕ್ಷವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.</p>.<p>ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಪಿಎಸ್ಐ ನೇಮಕಾತಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನ ಹಿಂದೆ ಕಾಂಗ್ರೆಸ್ ಪಕ್ಷವಿದೆ’ ಎಂದು ತಿಳಿಸಿದ್ದಾರೆ.</p>.<p>‘ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಲ್ಲೇ ಸಿಐಡಿ ಪೊಲೀಸರು ಪ್ರಿಯಾಂಕ್ ಖರ್ಗೆ ಅವರ ವಿಚಾರಣೆಗೆ ನೋಟಿಸ್ ನೀಡಿದ್ದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>‘ಅಡಿಯಿಂದ ಮುಡಿವರೆಗೆ ಶೇ 100 ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣ ಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಿಎಸ್ಐ ನೇಮಕಾತಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿರುವ ಶಾಸಕ ಪ್ರಿಯಾಂಕ್ ಖರ್ಗೆ ಬೆನ್ನ ಹಿಂದೆ ಕಾಂಗ್ರೆಸ್ ಪಕ್ಷವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.</p>.<p>ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಪಿಎಸ್ಐ ನೇಮಕಾತಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನ ಹಿಂದೆ ಕಾಂಗ್ರೆಸ್ ಪಕ್ಷವಿದೆ’ ಎಂದು ತಿಳಿಸಿದ್ದಾರೆ.</p>.<p>‘ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಲ್ಲೇ ಸಿಐಡಿ ಪೊಲೀಸರು ಪ್ರಿಯಾಂಕ್ ಖರ್ಗೆ ಅವರ ವಿಚಾರಣೆಗೆ ನೋಟಿಸ್ ನೀಡಿದ್ದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>‘ಅಡಿಯಿಂದ ಮುಡಿವರೆಗೆ ಶೇ 100 ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣ ಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>