<p><strong>ಮೈಸೂರು:</strong> ‘ನಾನು ಹೈಕಮಾಂಡ್ ಮಾತನ್ನು ಮಾತ್ರವೇ ಕೇಳುವುದು, ಅವರು ಹೇಳಿದರೆ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಬುಧವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಇರುತ್ತದೆ. ನೀವೇ ಇರಿ ಎಂದರೆ ಇರುತ್ತೇನೆ. ಎಲ್ಲಾ ತೀರ್ಮಾನವನ್ನೂ ಮಾಡುವುದು ಹೈಕಮಾಂಡ್. ಬೇರೆ ಯಾರೇ ಏನೇ ಹೇಳಿದರೂ ಅವರ ವೈಯಕ್ತಿಕ ಅಭಿಪ್ರಾಯವಷ್ಟೆ’ ಎಂದರು.</p><p>‘ರಾಹುಲ್ ಗಾಂಧಿ ನನ್ನನ್ನು ಈವರೆಗೂ ನವದೆಹಲಿಗೆ ಕರೆದಿಲ್ಲ. ಅವರಾಗಿಯೇ ಕರೆದರೆ ಹೋಗುತ್ತೇನೆ. ನಾನಾಗಿಯೇ ಹೋಗಬೇಕಾದಲ್ಲಿ ರಾಹುಲ್ ಗಾಂಧಿ ಅವರು ಸಮಯ ಕೊಟ್ಟಾಗ ಹೋಗುತ್ತೇನೆ. ಸಚಿವ ಸಂಪುಟ ಪುನರ್ರಚನೆಯೋ, ವಿಸ್ತರಣೆಯೋ ಎಂಬುದನ್ನು ಅವರು ಸಮಯ ಕೊಟ್ಟ ಮೇಲೆ ಚರ್ಚಿಸಿ ತೀರ್ಮಾನಿಸುತ್ತೇನೆ. ಯಾವಾಗ ಕರೆಯುತ್ತಾರೆಯೋ ಗೊತ್ತಿಲ್ಲ’ ಎಂದು ಹೇಳಿದರು.</p><p>‘ಸಿಎಂ ಕುರ್ಚಿಯ ವಿಚಾರಕ್ಕೆ ತೆರೆ ಬೀಳುತ್ತದೆಯೇ’ ಎಂಬ ಪ್ರಶ್ನೆಗೆ, ‘ಹೈಕಮಾಂಡ್ ತೀರ್ಮಾನಿಸಬೇಕು, ಅದರಂತೆ ನಡೆದುಕೊಳ್ಳುತ್ತೇನೆ’ ಎಂದರು.</p><p>ನೀವೇ ಐದು ವರ್ಷ ಪೂರ್ಣಗೊಳಿಸುವ ಆತ್ಮವಿಶ್ವಾಸ ಇದೆಯೇ ಎಂಬ ಪ್ರಶ್ನೆಗೆ, ‘ಹೈಕಮಾಂಡ್ ಹೇಳಿದಂತೆ ಕೇಳುತ್ತೇನಷ್ಟೆ. ಏನೇನೋ ಪ್ರಶ್ನೆ ಕೇಳಿದರೆ, ಅದಕ್ಕೆಲ್ಲ ಉತ್ತರ ಕೊಡಕ್ಕಾಗಲ್ಲ’ ಎಂದು ಗರಂ ಆದರು.</p><p>‘ನಮ್ಮ ಸರ್ಕಾರ ಹಾಗೂ ನಮ್ಮ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಇಲ್ಲದಿದ್ದರೆ ಆಗ ಮೂರು ಉಪ ಚುನಾವಣೆ ಹಾಗೂ ಈಗ ಎರಡು ಚುನಾವಣೆಗಳಲ್ಲಿ ನಾವು ಗೆಲ್ಲುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಶೀಘ್ರದಲ್ಲೇ ಮಾಡುತ್ತೇವೆ’ ಎಂದು ಪ್ರತಿಕ್ರಿಯಿಸಿದರು.</p><p>‘ವಿರೋಧ ಪಕ್ಷದವರು ಚುನಾವಣೆಯಲ್ಲಿ ತಂತ್ರಗಾರಿಕೆಯನ್ನೇನೂ ಮಾಡುವುದಿಲ್ಲ, ಅವರು ಕುತಂತ್ರಿಗಳು, ಕುತಂತ್ರ ಮಾಡ್ತಾರಷ್ಟೆ’ ಎಂದು ಪ್ರತಿಕ್ರಿಯಿಸಿದರು.</p><p>ಸಚಿವರಾದ ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಶಾಸಕರಾದ ಕೆ.ಹರೀಶ್ಗೌಡ, ಎ.ಆರ್. ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್, ನಗರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ರಾಮು ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾನು ಹೈಕಮಾಂಡ್ ಮಾತನ್ನು ಮಾತ್ರವೇ ಕೇಳುವುದು, ಅವರು ಹೇಳಿದರೆ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಬುಧವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಇರುತ್ತದೆ. ನೀವೇ ಇರಿ ಎಂದರೆ ಇರುತ್ತೇನೆ. ಎಲ್ಲಾ ತೀರ್ಮಾನವನ್ನೂ ಮಾಡುವುದು ಹೈಕಮಾಂಡ್. ಬೇರೆ ಯಾರೇ ಏನೇ ಹೇಳಿದರೂ ಅವರ ವೈಯಕ್ತಿಕ ಅಭಿಪ್ರಾಯವಷ್ಟೆ’ ಎಂದರು.</p><p>‘ರಾಹುಲ್ ಗಾಂಧಿ ನನ್ನನ್ನು ಈವರೆಗೂ ನವದೆಹಲಿಗೆ ಕರೆದಿಲ್ಲ. ಅವರಾಗಿಯೇ ಕರೆದರೆ ಹೋಗುತ್ತೇನೆ. ನಾನಾಗಿಯೇ ಹೋಗಬೇಕಾದಲ್ಲಿ ರಾಹುಲ್ ಗಾಂಧಿ ಅವರು ಸಮಯ ಕೊಟ್ಟಾಗ ಹೋಗುತ್ತೇನೆ. ಸಚಿವ ಸಂಪುಟ ಪುನರ್ರಚನೆಯೋ, ವಿಸ್ತರಣೆಯೋ ಎಂಬುದನ್ನು ಅವರು ಸಮಯ ಕೊಟ್ಟ ಮೇಲೆ ಚರ್ಚಿಸಿ ತೀರ್ಮಾನಿಸುತ್ತೇನೆ. ಯಾವಾಗ ಕರೆಯುತ್ತಾರೆಯೋ ಗೊತ್ತಿಲ್ಲ’ ಎಂದು ಹೇಳಿದರು.</p><p>‘ಸಿಎಂ ಕುರ್ಚಿಯ ವಿಚಾರಕ್ಕೆ ತೆರೆ ಬೀಳುತ್ತದೆಯೇ’ ಎಂಬ ಪ್ರಶ್ನೆಗೆ, ‘ಹೈಕಮಾಂಡ್ ತೀರ್ಮಾನಿಸಬೇಕು, ಅದರಂತೆ ನಡೆದುಕೊಳ್ಳುತ್ತೇನೆ’ ಎಂದರು.</p><p>ನೀವೇ ಐದು ವರ್ಷ ಪೂರ್ಣಗೊಳಿಸುವ ಆತ್ಮವಿಶ್ವಾಸ ಇದೆಯೇ ಎಂಬ ಪ್ರಶ್ನೆಗೆ, ‘ಹೈಕಮಾಂಡ್ ಹೇಳಿದಂತೆ ಕೇಳುತ್ತೇನಷ್ಟೆ. ಏನೇನೋ ಪ್ರಶ್ನೆ ಕೇಳಿದರೆ, ಅದಕ್ಕೆಲ್ಲ ಉತ್ತರ ಕೊಡಕ್ಕಾಗಲ್ಲ’ ಎಂದು ಗರಂ ಆದರು.</p><p>‘ನಮ್ಮ ಸರ್ಕಾರ ಹಾಗೂ ನಮ್ಮ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಇಲ್ಲದಿದ್ದರೆ ಆಗ ಮೂರು ಉಪ ಚುನಾವಣೆ ಹಾಗೂ ಈಗ ಎರಡು ಚುನಾವಣೆಗಳಲ್ಲಿ ನಾವು ಗೆಲ್ಲುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಶೀಘ್ರದಲ್ಲೇ ಮಾಡುತ್ತೇವೆ’ ಎಂದು ಪ್ರತಿಕ್ರಿಯಿಸಿದರು.</p><p>‘ವಿರೋಧ ಪಕ್ಷದವರು ಚುನಾವಣೆಯಲ್ಲಿ ತಂತ್ರಗಾರಿಕೆಯನ್ನೇನೂ ಮಾಡುವುದಿಲ್ಲ, ಅವರು ಕುತಂತ್ರಿಗಳು, ಕುತಂತ್ರ ಮಾಡ್ತಾರಷ್ಟೆ’ ಎಂದು ಪ್ರತಿಕ್ರಿಯಿಸಿದರು.</p><p>ಸಚಿವರಾದ ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಶಾಸಕರಾದ ಕೆ.ಹರೀಶ್ಗೌಡ, ಎ.ಆರ್. ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್, ನಗರ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ರಾಮು ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>