ನಾನು ಈಗ ಮುಖ್ಯಮಂತ್ರಿ ಸ್ಥಾನದ ಕನಸು ಕಂಡಿಲ್ಲ. ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಟ್ಟಿದ್ದೇನೆ. 2028ರ ವೇಳೆಗೆ ಮುಖ್ಯಮಂತ್ರಿ ಆಗಲು ತಯಾರಿ ಮಾಡಿಕೊಳ್ಳುತ್ತೇವೆ.
– ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ
ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಬದಲಾಗುವ ಪ್ರಶ್ನೆಯೇ ಇಲ್ಲ. ಆಸೆಗಳು ಇದ್ದೇ ಇರುತ್ತವೆ.
– ಬೈರತಿ ಸುರೇಶ್, ನಗರಾಭಿವೃದ್ಧಿ ಸಚಿವ
ಸಿ.ಎಂ– ಡಿಕೆಶಿ ಭೇಟಿ
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಬೆಳಿಗ್ಗೆ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಭಾನುವಾರ ರಾತ್ರಿ ಕುಟುಂಬ ಸಮೇತ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದು ಸೆ. 15ರಂದು ವಾಪಸಾಗಲಿದ್ದಾರೆ. ಅಮೆರಿಕ ಪ್ರವಾಸದ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿರುವ ಶಿವಕುಮಾರ್ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಪತ್ರ ಬರೆದಿದ್ದಾರೆ. ‘ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದು ಈ ಸಂದರ್ಭದಲ್ಲಿ ನಾನು ಯಾವುದೇ ನಾಯಕರನ್ನೂ ಭೇಟಿ ಮಾಡುತ್ತಿಲ್ಲ’ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಸರದಿ ಮುಗಿದ ಬಳಿಕ ಮುಂದೊಂದು ದಿನ ನಾನು ಮುಖ್ಯಮಂತ್ರಿ ಆಗುತ್ತೇನೆ. ಸಿ.ಎಂ ಆಗುವ ಆಸೆಯಿದೆ. ಆದರೆ ಯಾರದೋ ಸ್ಥಾನ ಕಸಿದುಕೊಂಡು ಆಗುವ ದುರಾಸೆ ನನಗಿಲ್ಲ