<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ನಾಯಕತ್ವ ಬದಲಾವಣೆ ವಿಷಯ ಚರ್ಚೆ ನಡೆಯುತ್ತಿದ್ದಾಗ ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು.</p><p>‘ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಈ ಚರ್ಚೆಯೇ ಅನವಶ್ಯಕ’ ಎಂದು ಪ್ರತಿಪಾದಿಸಿದರು.</p><p>ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ನ ಆರ್.ವಿ. ದೇಶಪಾಂಡೆ, ‘ಎರಡೂವರೆ ವರ್ಷ ಎಂಬುದೆಲ್ಲ ಇಲ್ಲ. ಉಳಿದೆಲ್ಲವೂ ಅನವಶ್ಯಕ ಚರ್ಚೆ. ಇದನ್ನು ಇಲ್ಲಿಗೆ ನಿಲ್ಲಿಸಿ’ ಎಂದು ಸಲಹೆ ನೀಡಿದರು.</p><p>ಅವರಿಗೆ ದನಿಗೂಡಿಸಿದ ಕಾಂಗ್ರೆಸ್ನ ಅಪ್ಪಾಜಿ ಸಿ.ಎಸ್. ನಾಡಗೌಡ, ‘ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇದ್ದಿದ್ದರೆ ಕಾಂಗ್ರೆಸ್ ಶಾಸಕರ ಬಳಿ ಚರ್ಚೆ ಆಗುತ್ತಿತ್ತು. ನಮ್ಮ ಬಳಿ ಆ ಕುರಿತು ಚರ್ಚೆಯೇ ಆಗಿಲ್ಲ’ ಎಂದು ಹೇಳಿದರು.</p><p><strong>‘ನಿಮ್ಮಪ್ಪನಾಣೆ ಅಧಿಕಾರಕ್ಕೆ ಬರಲ್ಲ’: </strong></p><p>‘ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ನಿಮ್ಮಪ್ಪನಾಣೆ ನೀವು ಅಧಿಕಾರಕ್ಕೆ ಬರುವುದಿಲ್ಲ. 2028ಕ್ಕೂ ನಾವೇ. 2033ಕ್ಕೂ ನಾವೇ ಅಧಿಕಾರಕ್ಕೆ ಬರುವುದು’ ಎಂದು ಸಿದ್ದರಾಮಯ್ಯ ಅವರು ಬಿಜೆಪಿಯವರನ್ನು ಉದ್ದೇಶಿಸಿ ಗುಡುಗಿದರು.</p><p>ವಿಪಕ್ಷದ ನಾಯಕ ಆರ್. ಅಶೋಕ, ‘ಯಡಿಯೂರಪ್ಪ ಸಿ.ಎಂ ಆಗುವುದಕ್ಕೂ ಮೊದಲು ನೀವು ಹೀಗೆ ಹೇಳಿದ್ದೀರಿ. ಆದರೆ, ಯಡಿಯೂರಪ್ಪ ಐದು ಬಾರಿ ಮುಖ್ಯಮಂತ್ರಿ ಆದರು’ ಎಂದರು.</p><p>ಸಿದ್ದರಾಮಯ್ಯ, ‘ಅದಕ್ಕೆ ಅವರನ್ನು ಮುಖ್ಯಮಂತ್ರಿ ಆಗಿ ಐದು ವರ್ಷ ಪೂರ್ಣಗೊಳಿಸಲು ಬಿಡಲಿಲ್ಲ’ ಎಂದು ತಿರುಗೇಟು ನೀಡಿದರು. ಅದಕ್ಕೆ ಅಶೋಕ, ‘ಈಗ ಎರಡೂವರೆ ವರ್ಷದ ನಂತರ ನೀವು ಬದಲಾಗುತ್ತೀರಿ ಎಂಬ ಮಾಹಿತಿಯಿದೆ’ ಎಂದು ಕುಟುಕಿದರು.</p><p>ಆಕ್ರೋಶಗೊಂಡ ಸಿದ್ದರಾಮಯ್ಯ, ‘ನೀನು ವಿರೋಧ ಪಕ್ಷದ ನಾಯಕನಾಗಿ ಐದು ವರ್ಷ ಇರುತ್ತೀಯಾ’ ಎಂದು ಪ್ರಶ್ನಿಸಿದರು. ಅದಕ್ಕೆ ಬಿಜೆಪಿ ಶಾಸಕರು ಒಕ್ಕೊರಲಿನಿಂದ, ‘ಅಶೋಕ ಅವರೇ ಐದು ವರ್ಷ ವಿರೋಧ ಪಕ್ಷದ ನಾಯಕರು. ನಿಮ್ಮ ಕಥೆ ಹೇಳಿ’ ಎಂದು ಕಾಲೆಳೆದರು.</p><p>ಆಗ ಸಿದ್ದರಾಮಯ್ಯ, ‘ಯಡಿಯೂರಪ್ಪ ಅವರಿಗೂ ಇದೇ ರೀತಿ ಹೇಳುತ್ತಿದ್ದೀರಿ. ಆದರೆ, ಈಗ ಎಲ್ಲವೂ ಅನವಶ್ಯಕ ಚರ್ಚೆ ಬಿಡಿ’ ಎಂದರು.</p><p><strong>ತೋಳು ತಟ್ಟಿ ಹೇಳಿ: ಮುನಿರತ್ನ ಸವಾಲು</strong></p><p>‘ಈಗಲೂ ತೋಳು ತಟ್ಟಿ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿ’ ಎಂದು ಬಿಜೆಪಿಯ ಮುನಿರತ್ನ ಆಗ್ರಹಿಸಿದರು. ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಮುನಿರತ್ನ ಅವರು ತಮ್ಮ ತೋಳು ತಟ್ಟುತ್ತಾ, ‘ಸಿದ್ದರಾಮಯ್ಯ ಅವರು ಹಿಂದೆಲ್ಲ ಈ ರೀತಿ ತೋಳು ತಟ್ಟಿ ಸವಾಲು ಹಾಕುತ್ತಿದ್ದರು. ಈಗಲೂ ಅದನ್ನು ಹೇಳಲಿ’ ಎಂದು ತಮ್ಮ ಕಡು ವಿರೋಧಿ ಡಿ.ಕೆ.ಶಿವಕುಮಾರ್ ಅವರನ್ನು ಕೆಣಕುವಂತೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ನಾಯಕತ್ವ ಬದಲಾವಣೆ ವಿಷಯ ಚರ್ಚೆ ನಡೆಯುತ್ತಿದ್ದಾಗ ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು.</p><p>‘ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಈ ಚರ್ಚೆಯೇ ಅನವಶ್ಯಕ’ ಎಂದು ಪ್ರತಿಪಾದಿಸಿದರು.</p><p>ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ನ ಆರ್.ವಿ. ದೇಶಪಾಂಡೆ, ‘ಎರಡೂವರೆ ವರ್ಷ ಎಂಬುದೆಲ್ಲ ಇಲ್ಲ. ಉಳಿದೆಲ್ಲವೂ ಅನವಶ್ಯಕ ಚರ್ಚೆ. ಇದನ್ನು ಇಲ್ಲಿಗೆ ನಿಲ್ಲಿಸಿ’ ಎಂದು ಸಲಹೆ ನೀಡಿದರು.</p><p>ಅವರಿಗೆ ದನಿಗೂಡಿಸಿದ ಕಾಂಗ್ರೆಸ್ನ ಅಪ್ಪಾಜಿ ಸಿ.ಎಸ್. ನಾಡಗೌಡ, ‘ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇದ್ದಿದ್ದರೆ ಕಾಂಗ್ರೆಸ್ ಶಾಸಕರ ಬಳಿ ಚರ್ಚೆ ಆಗುತ್ತಿತ್ತು. ನಮ್ಮ ಬಳಿ ಆ ಕುರಿತು ಚರ್ಚೆಯೇ ಆಗಿಲ್ಲ’ ಎಂದು ಹೇಳಿದರು.</p><p><strong>‘ನಿಮ್ಮಪ್ಪನಾಣೆ ಅಧಿಕಾರಕ್ಕೆ ಬರಲ್ಲ’: </strong></p><p>‘ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ನಿಮ್ಮಪ್ಪನಾಣೆ ನೀವು ಅಧಿಕಾರಕ್ಕೆ ಬರುವುದಿಲ್ಲ. 2028ಕ್ಕೂ ನಾವೇ. 2033ಕ್ಕೂ ನಾವೇ ಅಧಿಕಾರಕ್ಕೆ ಬರುವುದು’ ಎಂದು ಸಿದ್ದರಾಮಯ್ಯ ಅವರು ಬಿಜೆಪಿಯವರನ್ನು ಉದ್ದೇಶಿಸಿ ಗುಡುಗಿದರು.</p><p>ವಿಪಕ್ಷದ ನಾಯಕ ಆರ್. ಅಶೋಕ, ‘ಯಡಿಯೂರಪ್ಪ ಸಿ.ಎಂ ಆಗುವುದಕ್ಕೂ ಮೊದಲು ನೀವು ಹೀಗೆ ಹೇಳಿದ್ದೀರಿ. ಆದರೆ, ಯಡಿಯೂರಪ್ಪ ಐದು ಬಾರಿ ಮುಖ್ಯಮಂತ್ರಿ ಆದರು’ ಎಂದರು.</p><p>ಸಿದ್ದರಾಮಯ್ಯ, ‘ಅದಕ್ಕೆ ಅವರನ್ನು ಮುಖ್ಯಮಂತ್ರಿ ಆಗಿ ಐದು ವರ್ಷ ಪೂರ್ಣಗೊಳಿಸಲು ಬಿಡಲಿಲ್ಲ’ ಎಂದು ತಿರುಗೇಟು ನೀಡಿದರು. ಅದಕ್ಕೆ ಅಶೋಕ, ‘ಈಗ ಎರಡೂವರೆ ವರ್ಷದ ನಂತರ ನೀವು ಬದಲಾಗುತ್ತೀರಿ ಎಂಬ ಮಾಹಿತಿಯಿದೆ’ ಎಂದು ಕುಟುಕಿದರು.</p><p>ಆಕ್ರೋಶಗೊಂಡ ಸಿದ್ದರಾಮಯ್ಯ, ‘ನೀನು ವಿರೋಧ ಪಕ್ಷದ ನಾಯಕನಾಗಿ ಐದು ವರ್ಷ ಇರುತ್ತೀಯಾ’ ಎಂದು ಪ್ರಶ್ನಿಸಿದರು. ಅದಕ್ಕೆ ಬಿಜೆಪಿ ಶಾಸಕರು ಒಕ್ಕೊರಲಿನಿಂದ, ‘ಅಶೋಕ ಅವರೇ ಐದು ವರ್ಷ ವಿರೋಧ ಪಕ್ಷದ ನಾಯಕರು. ನಿಮ್ಮ ಕಥೆ ಹೇಳಿ’ ಎಂದು ಕಾಲೆಳೆದರು.</p><p>ಆಗ ಸಿದ್ದರಾಮಯ್ಯ, ‘ಯಡಿಯೂರಪ್ಪ ಅವರಿಗೂ ಇದೇ ರೀತಿ ಹೇಳುತ್ತಿದ್ದೀರಿ. ಆದರೆ, ಈಗ ಎಲ್ಲವೂ ಅನವಶ್ಯಕ ಚರ್ಚೆ ಬಿಡಿ’ ಎಂದರು.</p><p><strong>ತೋಳು ತಟ್ಟಿ ಹೇಳಿ: ಮುನಿರತ್ನ ಸವಾಲು</strong></p><p>‘ಈಗಲೂ ತೋಳು ತಟ್ಟಿ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿ’ ಎಂದು ಬಿಜೆಪಿಯ ಮುನಿರತ್ನ ಆಗ್ರಹಿಸಿದರು. ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಮುನಿರತ್ನ ಅವರು ತಮ್ಮ ತೋಳು ತಟ್ಟುತ್ತಾ, ‘ಸಿದ್ದರಾಮಯ್ಯ ಅವರು ಹಿಂದೆಲ್ಲ ಈ ರೀತಿ ತೋಳು ತಟ್ಟಿ ಸವಾಲು ಹಾಕುತ್ತಿದ್ದರು. ಈಗಲೂ ಅದನ್ನು ಹೇಳಲಿ’ ಎಂದು ತಮ್ಮ ಕಡು ವಿರೋಧಿ ಡಿ.ಕೆ.ಶಿವಕುಮಾರ್ ಅವರನ್ನು ಕೆಣಕುವಂತೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>