<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.</p>.<p>ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಈ ಔತಣಕೂಟ ಆಯೋಜಿಸಲಾಗಿದೆ.</p>.<p>ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನವೆಂಬರ್ ಗೆ ಎರಡೂವರೆ ವರ್ಷ ತುಂಬುಲಿದ್ದು,, ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಯ ಮಾತು ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಔತಣ ಕೂಟ ಆಯೋಜಿಸಿರುವುದು ನಾನಾ ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.</p>.<p>ಸೋಮವಾರ ಬೆಳಗ್ಗೆ 9.45ಕ್ಕೆ ಕಿತ್ತೂರು ಉತ್ಸವ ಜ್ಯೋತಿಗೆ ವಿಧಾನಸೌಧ ಮುಂಭಾಗ ಚಾಲನೆ ನೀಡಿ ಬಳಿಕ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಧಾರವಾಡ ಮತ್ತು ಬಾಗಲಕೋಟೆ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿ ತೆರಳಲಿದ್ದಾರೆ. ಸಂಜೆ 5.30ಕ್ಕೆ ನಗರಕ್ಕೆ ವಾಪಸಾಗಲಿರುವ ಅವರು 6 ಗಂಟೆಗೆ ಕಾವೇರಿ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಈ ವೇಳೆ ಚರ್ಚೆಯಾಗುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.</p>.<p>ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಈ ಔತಣಕೂಟ ಆಯೋಜಿಸಲಾಗಿದೆ.</p>.<p>ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನವೆಂಬರ್ ಗೆ ಎರಡೂವರೆ ವರ್ಷ ತುಂಬುಲಿದ್ದು,, ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಯ ಮಾತು ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಔತಣ ಕೂಟ ಆಯೋಜಿಸಿರುವುದು ನಾನಾ ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.</p>.<p>ಸೋಮವಾರ ಬೆಳಗ್ಗೆ 9.45ಕ್ಕೆ ಕಿತ್ತೂರು ಉತ್ಸವ ಜ್ಯೋತಿಗೆ ವಿಧಾನಸೌಧ ಮುಂಭಾಗ ಚಾಲನೆ ನೀಡಿ ಬಳಿಕ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಧಾರವಾಡ ಮತ್ತು ಬಾಗಲಕೋಟೆ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿ ತೆರಳಲಿದ್ದಾರೆ. ಸಂಜೆ 5.30ಕ್ಕೆ ನಗರಕ್ಕೆ ವಾಪಸಾಗಲಿರುವ ಅವರು 6 ಗಂಟೆಗೆ ಕಾವೇರಿ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಈ ವೇಳೆ ಚರ್ಚೆಯಾಗುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>