<p><strong>ಮೈಸೂರು</strong>: ‘ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಇವರಿಬ್ಬರ ಜಗಳದಲ್ಲಿ ಮೂರನೇಯವರಿಗೆ ಅಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಾಭ ಆಗಬಹುದು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದರು.</p><p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಕೈತಪ್ಪಿದ ಬಗ್ಗೆ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಮೇಲಿನ ಕೋಪದಿಂದಲೇ ಹೊರತು ಬೇರೆ ಉದ್ದೇಶದಿಂದಲ್ಲ. ಈಗಲಾದರೂ ಆ ಕುರ್ಚಿ ಮೇಲೆ ಕೂರಿಸಲೆಂದೇ ಹೇಳಿದ್ದಾರೆ. ಅಕ್ಟೋಬರ್ನಲ್ಲಿ ಕ್ರಾಂತಿ ಆಗುತ್ತದೆ. ಡಿಕೆಶಿಗೆ ದೇವರೇ ಗತಿ’ ಎಂದರು.</p><p>‘ಡಿಕೆಶಿ ವರ ಕೊಡುವ ದೇವರನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿಲ್ಲವೇ? ಡಿಕೆಶಿಗೆ ಕಂಟಕ ಇರುವುದು ಜೆಡಿಎಸ್ನಿಂದ ಬಂದವರಿಂದಲೇ’ ಎಂದು ಹೇಳಿದರು.</p><p>‘ಡಿಕೆಶಿ ಮುಖ್ಯಮಂತ್ರಿ ಕುರ್ಚಿ ಎಳೆಯುತ್ತಿದ್ದಾರೆ. ಮತ್ತೊಂದೆಡೆ ಖರ್ಗೆ ಸಿಎಂ ಕುರ್ಚಿ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಗ್ಗೆ ಖರ್ಗೆಯವರು ಎಸ್.ಎಂ. ಕೃಷ್ಣ ಅವರು ಬದುಕಿದ್ದಾಗಲೇ ಹೇಳಬೇಕಿತ್ತು. ಈಗ ಹೇಳುವುದು ಕೃಷ್ಣ ಅವರಿಗೆ ಅವಮಾನ ಮಾಡಿದಂತೆಯೇ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಇವರಿಬ್ಬರ ಜಗಳದಲ್ಲಿ ಮೂರನೇಯವರಿಗೆ ಅಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಾಭ ಆಗಬಹುದು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದರು.</p><p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಕೈತಪ್ಪಿದ ಬಗ್ಗೆ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಮೇಲಿನ ಕೋಪದಿಂದಲೇ ಹೊರತು ಬೇರೆ ಉದ್ದೇಶದಿಂದಲ್ಲ. ಈಗಲಾದರೂ ಆ ಕುರ್ಚಿ ಮೇಲೆ ಕೂರಿಸಲೆಂದೇ ಹೇಳಿದ್ದಾರೆ. ಅಕ್ಟೋಬರ್ನಲ್ಲಿ ಕ್ರಾಂತಿ ಆಗುತ್ತದೆ. ಡಿಕೆಶಿಗೆ ದೇವರೇ ಗತಿ’ ಎಂದರು.</p><p>‘ಡಿಕೆಶಿ ವರ ಕೊಡುವ ದೇವರನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿಲ್ಲವೇ? ಡಿಕೆಶಿಗೆ ಕಂಟಕ ಇರುವುದು ಜೆಡಿಎಸ್ನಿಂದ ಬಂದವರಿಂದಲೇ’ ಎಂದು ಹೇಳಿದರು.</p><p>‘ಡಿಕೆಶಿ ಮುಖ್ಯಮಂತ್ರಿ ಕುರ್ಚಿ ಎಳೆಯುತ್ತಿದ್ದಾರೆ. ಮತ್ತೊಂದೆಡೆ ಖರ್ಗೆ ಸಿಎಂ ಕುರ್ಚಿ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಗ್ಗೆ ಖರ್ಗೆಯವರು ಎಸ್.ಎಂ. ಕೃಷ್ಣ ಅವರು ಬದುಕಿದ್ದಾಗಲೇ ಹೇಳಬೇಕಿತ್ತು. ಈಗ ಹೇಳುವುದು ಕೃಷ್ಣ ಅವರಿಗೆ ಅವಮಾನ ಮಾಡಿದಂತೆಯೇ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>