<p><strong>ಮೈಸೂರು:</strong> ‘ನಮ್ಮ ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿನ ವಿಶ್ವೇಶ್ವರ ನಗರದಲ್ಲಿ ಜಿಸಿ’ಸ್ ಸ್ಪೋರ್ಟ್ಸ್ ಮೆಡಿಸನ್ ಸೆಂಟರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ (50 ಹಾಸಿಗೆಗಳಿಂದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದೆ)ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಬಂದಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ತಿಳಿಸಿದ್ದರು. ಈ ನಿಟ್ಟಿನಲ್ಲಿ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಎಲ್ಲರನ್ನೂ ಸಾಮಾಜಿಕ, ಆರ್ಥಿಕವಾಗಿ ಸಫಲರಾಗಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಗಳನ್ನು ಇಟ್ಟಿದ್ದೇವೆ. ನುಡಿದಂತೆ ನಡೆಯುವುದು ಕಷ್ಟದ ಕೆಲಸವಾದರೂ, ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದರು.</p><p>‘ಡಾ.ಗಿರೀಶ್ ಚಂದ್ರ ಅವರು ವೈದ್ಯರಾಗಿ ಬದುಕನ್ನು ಸಾರ್ಥಕಗೊಳಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿರುವ ಬಡವರಿಗೆ ಉಚಿತವಾಗಿ, ಇಲ್ಲದಿದ್ದರೆ ಕಡಿಮೆ ಹಣದಲ್ಲಿ ಚಿಕಿತ್ಸೆ ಒದಗಿಸಬೇಕು’ ಎಂದು ಸಲಹೆ ನೀಡಿದರು.</p><p>‘ಮೈಸೂರು ಜಿಲ್ಲೆಯವನೇ ಆದ ನನ್ನ ಮೇಲೆ ಇಲ್ಲಿನ ಜನರ ಋಣವಿದೆ. ಆದ್ದರಿಂದ ಮೈಸೂರಿನ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ. ಸಮಾಜಮುಖಿಯಾಗುವ ಮೂಲಕ ಮನುಷ್ಯ ತನ್ನ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದರು.</p><p>‘ಈ ಭಾಗದಲ್ಲಿ ಇಂಥದೊಂದು ಆಸ್ಪತ್ರೆ ಬೇಕಾಗಿತ್ತು. ಇದನ್ನು ಸಾಧ್ಯವಾಗಿಸಿದ್ದಕ್ಕಾಗಿ ಗಿರೀಶ್ ಚಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಒಳ್ಳೆಯ ವೈದ್ಯ ಅವರು’ ಎಂದರು.</p><p>‘ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಈಗ ಆಗಿವೆ. ಒಳ್ಳೆಯ ವೈದ್ಯ ಎನಿಸಿಕೊಳ್ಳಬೇಕಾದರೆ ಸೇವಾ ಮನೋಭಾವ ಇರಬೇಕು. ಸಮಾಜದಲ್ಲಿ ಶಿಕ್ಷಣದೊಂದಿಗೆ ಆರೋಗ್ಯ ಬಹಳ ಮುಖ್ಯ. ಆರೋಗ್ಯವಾಗಿ ಎಷ್ಟು ದಿನ ಬದುಕುತ್ತೇವೆ ಎನ್ನುವುದು ಬಹಳ ಮುಖ್ಯ’ ಎಂದು ಹೇಳಿದರು.</p><p>‘ಆರೋಗ್ಯವಾಗಿರಬೇಕು ಎಂದು ಎಷ್ಟೇ ಅಂದುಕೊಂಡರೂ ವಯಸ್ಸಾಗುತ್ತಿರುವುದರಿಂದ ನನಗೂ ಆಗಾಗ ಆರೋಗ್ಯ ಕೆಡುತ್ತಿದೆ’ ಎಂದರು.</p><p>ಶಾಸಕ ಕೆ.ಹರೀಶ್ಗೌಡ, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಆಸ್ಪತ್ರೆಯ ಮುಖ್ಯಸ್ಥ ಡಾ.ಗಿರೀಶ್ ಚಂದ್ರ ಹಾಗೂ ಆಡಳಿತಾಧಿಕಾರಿ ಲಿಖಿತಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಮ್ಮ ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p><p>ಇಲ್ಲಿನ ವಿಶ್ವೇಶ್ವರ ನಗರದಲ್ಲಿ ಜಿಸಿ’ಸ್ ಸ್ಪೋರ್ಟ್ಸ್ ಮೆಡಿಸನ್ ಸೆಂಟರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ (50 ಹಾಸಿಗೆಗಳಿಂದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದೆ)ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಬಂದಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ತಿಳಿಸಿದ್ದರು. ಈ ನಿಟ್ಟಿನಲ್ಲಿ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಎಲ್ಲರನ್ನೂ ಸಾಮಾಜಿಕ, ಆರ್ಥಿಕವಾಗಿ ಸಫಲರಾಗಿಸುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆಗಳನ್ನು ಇಟ್ಟಿದ್ದೇವೆ. ನುಡಿದಂತೆ ನಡೆಯುವುದು ಕಷ್ಟದ ಕೆಲಸವಾದರೂ, ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದರು.</p><p>‘ಡಾ.ಗಿರೀಶ್ ಚಂದ್ರ ಅವರು ವೈದ್ಯರಾಗಿ ಬದುಕನ್ನು ಸಾರ್ಥಕಗೊಳಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿರುವ ಬಡವರಿಗೆ ಉಚಿತವಾಗಿ, ಇಲ್ಲದಿದ್ದರೆ ಕಡಿಮೆ ಹಣದಲ್ಲಿ ಚಿಕಿತ್ಸೆ ಒದಗಿಸಬೇಕು’ ಎಂದು ಸಲಹೆ ನೀಡಿದರು.</p><p>‘ಮೈಸೂರು ಜಿಲ್ಲೆಯವನೇ ಆದ ನನ್ನ ಮೇಲೆ ಇಲ್ಲಿನ ಜನರ ಋಣವಿದೆ. ಆದ್ದರಿಂದ ಮೈಸೂರಿನ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ. ಸಮಾಜಮುಖಿಯಾಗುವ ಮೂಲಕ ಮನುಷ್ಯ ತನ್ನ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದರು.</p><p>‘ಈ ಭಾಗದಲ್ಲಿ ಇಂಥದೊಂದು ಆಸ್ಪತ್ರೆ ಬೇಕಾಗಿತ್ತು. ಇದನ್ನು ಸಾಧ್ಯವಾಗಿಸಿದ್ದಕ್ಕಾಗಿ ಗಿರೀಶ್ ಚಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಒಳ್ಳೆಯ ವೈದ್ಯ ಅವರು’ ಎಂದರು.</p><p>‘ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಈಗ ಆಗಿವೆ. ಒಳ್ಳೆಯ ವೈದ್ಯ ಎನಿಸಿಕೊಳ್ಳಬೇಕಾದರೆ ಸೇವಾ ಮನೋಭಾವ ಇರಬೇಕು. ಸಮಾಜದಲ್ಲಿ ಶಿಕ್ಷಣದೊಂದಿಗೆ ಆರೋಗ್ಯ ಬಹಳ ಮುಖ್ಯ. ಆರೋಗ್ಯವಾಗಿ ಎಷ್ಟು ದಿನ ಬದುಕುತ್ತೇವೆ ಎನ್ನುವುದು ಬಹಳ ಮುಖ್ಯ’ ಎಂದು ಹೇಳಿದರು.</p><p>‘ಆರೋಗ್ಯವಾಗಿರಬೇಕು ಎಂದು ಎಷ್ಟೇ ಅಂದುಕೊಂಡರೂ ವಯಸ್ಸಾಗುತ್ತಿರುವುದರಿಂದ ನನಗೂ ಆಗಾಗ ಆರೋಗ್ಯ ಕೆಡುತ್ತಿದೆ’ ಎಂದರು.</p><p>ಶಾಸಕ ಕೆ.ಹರೀಶ್ಗೌಡ, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಆಸ್ಪತ್ರೆಯ ಮುಖ್ಯಸ್ಥ ಡಾ.ಗಿರೀಶ್ ಚಂದ್ರ ಹಾಗೂ ಆಡಳಿತಾಧಿಕಾರಿ ಲಿಖಿತಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>