ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಸ್ವಯಂ ಘೋಷಿತ ಸಂವಿಧಾನ ತಜ್ಞ: ಕುಮಾರಸ್ವಾಮಿ

Published 24 ಮೇ 2024, 16:21 IST
Last Updated 24 ಮೇ 2024, 16:21 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸದ ಪ್ರಜ್ವಲ್‌ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಅವರ ತಾತ ದೇವೇಗೌಡರು. ಈಗ ಪತ್ರ ಬರೆದು ಏನು ಮಾಡುತ್ತಾರೆ’ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್‌ ರಾಜ್ಯ ಘಟಕದ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ‘ಎಕ್ಸ್‌’ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ’ ಎನ್ನುವ ಸ್ವಯಂ ಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ತಮ್ಮ ಪಕ್ಕದಲ್ಲೇ ಕುಳಿತುಕೊಳ್ಳುವ ಪೆನ್‌ಡ್ರೈವ್‌ ಹಂಚಿಕೆ ಸೂತ್ರಧಾರಿ ಉಪ ಮುಖ್ಯಮಂತ್ರಿಯನ್ನು ಏಕೆ ಪ್ರಶ್ನಿಸಿಲ್ಲ? ಅಮಾನುಷಕ್ಕೆ ತುತ್ತಾದ ಮಹಿಳೆಯರ ವಿಡಿಯೊಗಳನ್ನು ಹಂಚಿಕೆ ಮಾಡಿ ವಿಕೃತಾನಂದ ಅನುಭವಿಸುವುದನ್ನೂ ಸಮರ್ಥಿಕೊಳ್ಳುವಿರಾ? ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡುವ ಅವರಿಗೆ ಆತ್ಮಸಾಕ್ಷಿ ಇದೆಯಾ ಎಂದು ಪ್ರಶ್ನಿಸಿದ್ದಾರೆ.

‘ನನ್ನ ಮಾತಿಗೆ ಗೌರವ ಕೊಟ್ಟು ವಾಪಸ್‌ ಬಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಖಚಿತವಾಗಿ ಹೇಳುತ್ತೀರಿ ಎಂದರೆ ನಮ್ಮ ಮನೆಗೆ ಕಳ್ಳಗಿವಿ ಇಟ್ಟಿದ್ದೀರಿ ಎಂಬ ಆರೋಪ ಸತ್ಯವಾಯಿತಲ್ಲ’ ಎಂದು ಆರೋಪಿಸಿದ್ದಾರೆ.

‘ಪ್ರಜ್ವಲ್‌ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಎಲ್ಲರೂ ಈ ಕಾನೂನಿಗೆ ತಲೆ ಬಾಗಲೇಬೇಕು. ಉಪ್ಪು ತಿಂದವ ನೀರು ಕುಡಿಯಲೇ ಬೇಕು’ ಎಂದು ಕುಮಾರಸ್ವಾಮಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT