<p><strong>ಬೆಂಗಳೂರು</strong>: ಅಧಿಕಾರದ ಮದದಲ್ಲಿ ತೇಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ–ನುಡಿಗಳು ವಿಪರೀತಕ್ಕೆ ಹೋಗಿವೆ. ಪೊಲೀಸ್ ಅಧಿಕಾರಿಯ ವಿರುದ್ಧ ಕೈ ಮಾಡಲು ಹೋಗಿ ಮುಖ್ಯಮಂತ್ರಿ ಸ್ಥಾನದ ಘನತೆಗೇ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.</p><p>ಈ ಕುರಿತು ‘ಎಕ್ಸ್’ ಮಾಡಿರುವ ಅವರು, ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು. ಇದರಿಂದ ವಿಚಲಿತರಾದ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯ ವಿರುದ್ಧ ಆರ್ಭಟಿಸಿ, ಕೈ ಮಾಡಲು ಹೋಗಿದ್ದಾರೆ ಎಂದಿದ್ದಾರೆ.</p><p>ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ಜಿಲ್ಲಾಧಿಕಾರಿಯೊಬ್ಬರನ್ನು ವೇದಿಕೆಯ ಮೇಲೆ ಅಪಮಾನಿಸಿ ತಮ್ಮ ಸಂಸ್ಕೃತಿ ಮತ್ತು ನಡವಳಿಕೆಯನ್ನು ಬಹಿರಂಗಗೊಳಿಸಿದ್ದರು. ಅವರ ವರ್ತನೆ ಇಂದು ನಿನ್ನೆಯದಲ್ಲ. ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ವಿರುದ್ಧವೂ ಇದೇ ರೀತಿ ವರ್ತಿಸಿದ್ದರು. ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ<br>ವರು ಅನುಭವದ ಹಿರಿತನ, ನಡವಳಿಕೆಯಿಂದ ಪಕ್ವರಾಗಿರಬೇಕು. ಸಿದ್ದರಾಮಯ್ಯ ಅವರ ವಿಷಯದಲ್ಲಿ ಇದು ತಿರುಗುಮುರಗಾಗಿದೆ. ದಿನೇ ದಿನೇ ತಮ್ಮ ನಾಲಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.</p><p><strong>ಬೇಹುಗಾರಿಕೆ ವೈಫಲ್ಯವೇ?: </strong></p><p>‘ಮುಖ್ಯ ಮಂತ್ರಿಯವರೇ ನಿಮ್ಮ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಯುತ್ತದೆ ಎಂಬ ಮಾಹಿತಿ ನಿಮ್ಮ ಗುಪ್ತಚರದಳಕ್ಕೆ ಇರಲಿಲ್ಲವೇ? ಇದು ಬೇಹುಗಾರಿಕೆ ವೈಫಲ್ಯಅಲ್ಲವೇ?’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.</p><p>ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜಮ್ಮು–ಕಾಶ್ಮೀರದ ವಿಚಾರದಲ್ಲಿ ದೇಶದ ವಿರುದ್ಧ ಸುಳ್ಳುಗಳನ್ನು ಹೇಳುವ ಕೆಲಸ ಮಾಡುತ್ತಿದ್ದರು. ಅದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಧಿಕಾರದ ಮದದಲ್ಲಿ ತೇಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ–ನುಡಿಗಳು ವಿಪರೀತಕ್ಕೆ ಹೋಗಿವೆ. ಪೊಲೀಸ್ ಅಧಿಕಾರಿಯ ವಿರುದ್ಧ ಕೈ ಮಾಡಲು ಹೋಗಿ ಮುಖ್ಯಮಂತ್ರಿ ಸ್ಥಾನದ ಘನತೆಗೇ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.</p><p>ಈ ಕುರಿತು ‘ಎಕ್ಸ್’ ಮಾಡಿರುವ ಅವರು, ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು. ಇದರಿಂದ ವಿಚಲಿತರಾದ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಯ ವಿರುದ್ಧ ಆರ್ಭಟಿಸಿ, ಕೈ ಮಾಡಲು ಹೋಗಿದ್ದಾರೆ ಎಂದಿದ್ದಾರೆ.</p><p>ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ಜಿಲ್ಲಾಧಿಕಾರಿಯೊಬ್ಬರನ್ನು ವೇದಿಕೆಯ ಮೇಲೆ ಅಪಮಾನಿಸಿ ತಮ್ಮ ಸಂಸ್ಕೃತಿ ಮತ್ತು ನಡವಳಿಕೆಯನ್ನು ಬಹಿರಂಗಗೊಳಿಸಿದ್ದರು. ಅವರ ವರ್ತನೆ ಇಂದು ನಿನ್ನೆಯದಲ್ಲ. ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ವಿರುದ್ಧವೂ ಇದೇ ರೀತಿ ವರ್ತಿಸಿದ್ದರು. ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ<br>ವರು ಅನುಭವದ ಹಿರಿತನ, ನಡವಳಿಕೆಯಿಂದ ಪಕ್ವರಾಗಿರಬೇಕು. ಸಿದ್ದರಾಮಯ್ಯ ಅವರ ವಿಷಯದಲ್ಲಿ ಇದು ತಿರುಗುಮುರಗಾಗಿದೆ. ದಿನೇ ದಿನೇ ತಮ್ಮ ನಾಲಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.</p><p><strong>ಬೇಹುಗಾರಿಕೆ ವೈಫಲ್ಯವೇ?: </strong></p><p>‘ಮುಖ್ಯ ಮಂತ್ರಿಯವರೇ ನಿಮ್ಮ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಯುತ್ತದೆ ಎಂಬ ಮಾಹಿತಿ ನಿಮ್ಮ ಗುಪ್ತಚರದಳಕ್ಕೆ ಇರಲಿಲ್ಲವೇ? ಇದು ಬೇಹುಗಾರಿಕೆ ವೈಫಲ್ಯಅಲ್ಲವೇ?’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.</p><p>ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜಮ್ಮು–ಕಾಶ್ಮೀರದ ವಿಚಾರದಲ್ಲಿ ದೇಶದ ವಿರುದ್ಧ ಸುಳ್ಳುಗಳನ್ನು ಹೇಳುವ ಕೆಲಸ ಮಾಡುತ್ತಿದ್ದರು. ಅದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>