<p><strong>ಬೆಂಗಳೂರು:</strong> ‘ಸಿದ್ದರಾಮಯ್ಯ ಅವರು ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೆ ಅನಿವಾರ್ಯವಾಗಿದ್ದಾರೆ. ನಾವೆಲ್ಲ 138 ಶಾಸಕರು ಅವರ ಬೆಂಬಲಕ್ಕಿದ್ದೇವೆ’ ಎಂದು ಕಂಪ್ಲಿ ಶಾಸಕ ಕಂಪ್ಲಿ ಗಣೇಶ್ ಹೇಳಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ. ಇದಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯೇ ಸಾಕ್ಷಿಯಾಗಿದೆ. ಅವರು ಒಂದು ರೀತಿ ರೋಲ್ ಮಾಡೆಲ್ ಇದ್ದಂತೆ. ಅವರಿಂದಾಗಿ ನಮ್ಮ ಜಿಲ್ಲೆಯಲ್ಲಿನ (ಬಳ್ಳಾರಿ) ಐದಕ್ಕೆ ಐದು ನಾವು (ಕಾಂಗ್ರೆಸ್) ಗೆದ್ದಿದ್ದೇವೆ’ ಎಂದರು.</p>.ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ: ಸಚಿವ ಪರಮೇಶ್ವರ.<p>ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರವಾಗಿ ಮಾತನಾಡಿದ ಅವರು, ‘ಹೈಕಮಾಂಡ್ ಹೇಳಿದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರು ಮುಂದುವರಿದರೆ ಒಳ್ಳೆಯದಲ್ಲವೇ?’ ಎಂದರು.</p><p>ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ’ ಎಂದರು.</p>.ಮುಖ್ಯಮಂತ್ರಿ ಸಿದ್ದರಾಮಯ್ಯ 660 ಕೆವಿ ಕರೆಂಟ್ ಇದ್ದಂತೆ: ಮುನಿರತ್ನ.<p>ಅನುದಾನದ ಬಗ್ಗೆ ಶಾಸಕರ ಅಸಮಾಧಾನ ವಿಚಾರವಾಗಿಯೂ ಮಾತನಾಡಿದ ಅವರು, ‘ತನ್ನ ಅಧಿಕಾರ ಅವಧಿಯಲ್ಲಿ ಸರ್ಕಾರ ಏನೇನು ಮಾಡಿದೆ? ಗ್ಯಾರಂಟಿ ಯೋಜನೆಗಳು ನಗರ ಭಾಗಕ್ಕೆ ಅನುಕೂಲ ಆಗದಿರಬಹುದು. ಆದರೆ, ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುಕೂಲವಾಗಿದೆ. ಜನ ಸಿದ್ದರಾಮಯ್ಯ ಅವರನ್ನು ಹೊಗಳುತ್ತಿದ್ದಾರೆ’ ಎಂದರು.</p><p>‘ನನ್ನ ಕಂಪ್ಲಿ ಕ್ಷೇತ್ರದ ವಿವರ ತೆಗೆದುನೋಡಿ. ₹ 500 ಕೋಟಿ ಅನುದಾನ ನಮಗೆ ಸಿಕ್ಕಿದೆ. ₹ 150 ಕೋಟಿ ರಸ್ತೆ ಅಭಿವೃದ್ಧಿಗೆ ಸಿಕ್ಕಿದೆ. ಇತರ ಅನೇಕ ಅನುದಾನಗಳು ಸಿಕ್ಕಿವೆ. ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಹಣ ಸಿಕ್ಕಿದೆ. ನೂರಾರು ಕೋಟಿ ಹಾಸ್ಟೆಲ್ಗೆ ಕೊಟ್ಟಿದ್ದಾರೆ. ಅನುದಾನ ಕೊಡದೇ ಇದ್ದಿದ್ದರೆ ಇಷ್ಟು ಕೆಲಸ ಆಗುತ್ತಿತ್ತೇ? ಎಂದು ಪ್ರಶ್ನಿಸಿದರು</p>.ವೃತ್ತಕ್ಕೆ ಸಿದ್ದರಾಮಯ್ಯ ಹೆಸರಿಡಿ: ಭೋವಿ ಸಮುದಾಯದ ಮುಖಂಡರ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಿದ್ದರಾಮಯ್ಯ ಅವರು ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೆ ಅನಿವಾರ್ಯವಾಗಿದ್ದಾರೆ. ನಾವೆಲ್ಲ 138 ಶಾಸಕರು ಅವರ ಬೆಂಬಲಕ್ಕಿದ್ದೇವೆ’ ಎಂದು ಕಂಪ್ಲಿ ಶಾಸಕ ಕಂಪ್ಲಿ ಗಣೇಶ್ ಹೇಳಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ. ಇದಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯೇ ಸಾಕ್ಷಿಯಾಗಿದೆ. ಅವರು ಒಂದು ರೀತಿ ರೋಲ್ ಮಾಡೆಲ್ ಇದ್ದಂತೆ. ಅವರಿಂದಾಗಿ ನಮ್ಮ ಜಿಲ್ಲೆಯಲ್ಲಿನ (ಬಳ್ಳಾರಿ) ಐದಕ್ಕೆ ಐದು ನಾವು (ಕಾಂಗ್ರೆಸ್) ಗೆದ್ದಿದ್ದೇವೆ’ ಎಂದರು.</p>.ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದೇ ಭಾವಿಸಿದ್ದೇವೆ: ಸಚಿವ ಪರಮೇಶ್ವರ.<p>ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರವಾಗಿ ಮಾತನಾಡಿದ ಅವರು, ‘ಹೈಕಮಾಂಡ್ ಹೇಳಿದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರು ಮುಂದುವರಿದರೆ ಒಳ್ಳೆಯದಲ್ಲವೇ?’ ಎಂದರು.</p><p>ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ’ ಎಂದರು.</p>.ಮುಖ್ಯಮಂತ್ರಿ ಸಿದ್ದರಾಮಯ್ಯ 660 ಕೆವಿ ಕರೆಂಟ್ ಇದ್ದಂತೆ: ಮುನಿರತ್ನ.<p>ಅನುದಾನದ ಬಗ್ಗೆ ಶಾಸಕರ ಅಸಮಾಧಾನ ವಿಚಾರವಾಗಿಯೂ ಮಾತನಾಡಿದ ಅವರು, ‘ತನ್ನ ಅಧಿಕಾರ ಅವಧಿಯಲ್ಲಿ ಸರ್ಕಾರ ಏನೇನು ಮಾಡಿದೆ? ಗ್ಯಾರಂಟಿ ಯೋಜನೆಗಳು ನಗರ ಭಾಗಕ್ಕೆ ಅನುಕೂಲ ಆಗದಿರಬಹುದು. ಆದರೆ, ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುಕೂಲವಾಗಿದೆ. ಜನ ಸಿದ್ದರಾಮಯ್ಯ ಅವರನ್ನು ಹೊಗಳುತ್ತಿದ್ದಾರೆ’ ಎಂದರು.</p><p>‘ನನ್ನ ಕಂಪ್ಲಿ ಕ್ಷೇತ್ರದ ವಿವರ ತೆಗೆದುನೋಡಿ. ₹ 500 ಕೋಟಿ ಅನುದಾನ ನಮಗೆ ಸಿಕ್ಕಿದೆ. ₹ 150 ಕೋಟಿ ರಸ್ತೆ ಅಭಿವೃದ್ಧಿಗೆ ಸಿಕ್ಕಿದೆ. ಇತರ ಅನೇಕ ಅನುದಾನಗಳು ಸಿಕ್ಕಿವೆ. ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಹಣ ಸಿಕ್ಕಿದೆ. ನೂರಾರು ಕೋಟಿ ಹಾಸ್ಟೆಲ್ಗೆ ಕೊಟ್ಟಿದ್ದಾರೆ. ಅನುದಾನ ಕೊಡದೇ ಇದ್ದಿದ್ದರೆ ಇಷ್ಟು ಕೆಲಸ ಆಗುತ್ತಿತ್ತೇ? ಎಂದು ಪ್ರಶ್ನಿಸಿದರು</p>.ವೃತ್ತಕ್ಕೆ ಸಿದ್ದರಾಮಯ್ಯ ಹೆಸರಿಡಿ: ಭೋವಿ ಸಮುದಾಯದ ಮುಖಂಡರ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>