<p><strong>ಬೆಂಗಳೂರು</strong>: 'ನಮಗೆ (ಕಾಂಗ್ರೆಸ್ ) ಸಿದ್ದರಾಮಯ್ಯ ನಾಯಕತ್ವ ಬೇಕೇ ಬೇಕು. ನಿರ್ವಿವಾದವಾಗಿ ಇಡೀ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಬೇಕು. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಸಕ್ರಿಯವಾಗಿರಬೇಕು' ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರು ರಾಜಕಾರಣದಿಂದ ನಿವೃತ್ತಿ ಆಗಬಾರದು. ಚುನಾವಣೆಗೆ ನಿಲ್ಲೋದಿಲ್ಲ ಎಂದು ಅವರು ಹೇಳಿದರೂ ನಾವು ಒಪ್ಪೋದಿಲ್ಲ' ಎಂದರು.</p><p>'ರಾಜಕಾರಣದಿಂದ ಅವರು ಹೊರಗೆ ಉಳಿಯಬಾರದು ಅನ್ನೋದು ನನ್ನ ವಾದ. ರಾಹುಲ್ ಗಾಂಧಿ ಅನಿವಾರ್ಯತೆ ಅಲ್ವಾ, ಅದೇ ರೀತಿ ಸಿದ್ದರಾಮಯ್ಯ ಅನಿವಾರ್ಯತೆ ಇದೆ ಎಂದರು.</p><p>'ನಾಯಕತ್ವ ಬದಲಾವಣೆ ಸನ್ನಿವೇಶ, ಅನಿವಾರ್ಯತೆ ಇಲ್ಲ. ನಮ್ಮ ಮುಂದೆ ಅಂಥದ್ದೇನೂ ಇಲ್ಲ, ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದೂ ಹೇಳಿದರು.</p><p>ಎರಡೂವರೆ ವರ್ಷಗಳ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಬೇಕೆಂಬ ಸಚಿವ ಕೃಷ್ಣ ಬೈರೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಲಾಡ್, 'ಎರಡೂವರೆ ವರ್ಷ ಎಂದು ಹೈಕಮಾಂಡ್ ಯಾರ ಬಳಿಯೂ ಮಾತನಾಡಿಲ್ಲ. ನನ್ನ ಬಳಿಯಂತೂ ಯಾರೂ ಈ ರೀತಿ ಹೇಳಿಲ್ಲ. ನನಗೆ ಈ ವಿಚಾರ ಗೊತ್ತಿಲ್ಲ, ಅವರು ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು.</p>.ಬೆಂಗಳೂರು| ಕಾಗಿನೆಲೆ ಅಭಿವೃದ್ಧಿ: ₹ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ನಮಗೆ (ಕಾಂಗ್ರೆಸ್ ) ಸಿದ್ದರಾಮಯ್ಯ ನಾಯಕತ್ವ ಬೇಕೇ ಬೇಕು. ನಿರ್ವಿವಾದವಾಗಿ ಇಡೀ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಬೇಕು. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಸಕ್ರಿಯವಾಗಿರಬೇಕು' ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರು ರಾಜಕಾರಣದಿಂದ ನಿವೃತ್ತಿ ಆಗಬಾರದು. ಚುನಾವಣೆಗೆ ನಿಲ್ಲೋದಿಲ್ಲ ಎಂದು ಅವರು ಹೇಳಿದರೂ ನಾವು ಒಪ್ಪೋದಿಲ್ಲ' ಎಂದರು.</p><p>'ರಾಜಕಾರಣದಿಂದ ಅವರು ಹೊರಗೆ ಉಳಿಯಬಾರದು ಅನ್ನೋದು ನನ್ನ ವಾದ. ರಾಹುಲ್ ಗಾಂಧಿ ಅನಿವಾರ್ಯತೆ ಅಲ್ವಾ, ಅದೇ ರೀತಿ ಸಿದ್ದರಾಮಯ್ಯ ಅನಿವಾರ್ಯತೆ ಇದೆ ಎಂದರು.</p><p>'ನಾಯಕತ್ವ ಬದಲಾವಣೆ ಸನ್ನಿವೇಶ, ಅನಿವಾರ್ಯತೆ ಇಲ್ಲ. ನಮ್ಮ ಮುಂದೆ ಅಂಥದ್ದೇನೂ ಇಲ್ಲ, ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದೂ ಹೇಳಿದರು.</p><p>ಎರಡೂವರೆ ವರ್ಷಗಳ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಬೇಕೆಂಬ ಸಚಿವ ಕೃಷ್ಣ ಬೈರೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಲಾಡ್, 'ಎರಡೂವರೆ ವರ್ಷ ಎಂದು ಹೈಕಮಾಂಡ್ ಯಾರ ಬಳಿಯೂ ಮಾತನಾಡಿಲ್ಲ. ನನ್ನ ಬಳಿಯಂತೂ ಯಾರೂ ಈ ರೀತಿ ಹೇಳಿಲ್ಲ. ನನಗೆ ಈ ವಿಚಾರ ಗೊತ್ತಿಲ್ಲ, ಅವರು ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು.</p>.ಬೆಂಗಳೂರು| ಕಾಗಿನೆಲೆ ಅಭಿವೃದ್ಧಿ: ₹ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>