<p><strong>ನವದೆಹಲಿ:</strong> ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ದೆಹಲಿಗೆ ಶುಕ್ರವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ತಮ್ಮ ಪುತ್ರ ಯತೀಂದ್ರ ಅವರ ‘ರಾಜಕೀಯ ಪದೋನ್ನತಿ’ ಗಾಗಿ ಪಕ್ಷದ ಹೈಕಮಾಂಡ್ ಬೆಂಬಲ ಕೋರಿದರು.</p>.<p>10, ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಯತೀಂದ್ರ ಅವರೊಂದಿಗೆ ತೆರಳಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ತಮ್ಮ ಬೇಡಿಕೆ ಮುಂದಿಟ್ಟರು ಎಂದು ಮೂಲಗಳು ಹೇಳಿವೆ.</p>.<p>ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ವೇಳೆ, ಪಕ್ಷದ ಕರ್ನಾಟಕ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಜೆ.ಜಾರ್ಜ್ ಕೂಡ ಇದ್ದರು. ಸೋನಿಯಾ ಗಾಂಧಿ ಅವರು ಈ ವೇಳೆ ಇರಲಿಲ್ಲ ಎಂದು ಇವೇ ಮೂಲಗಳು ಹೇಳಿವೆ.</p>.<p>ಆದರೆ, ಯತೀಂದ್ರ ಅವರು ರಾಹುಲ್ ಗಾಂಧಿ ಅವರೊಂದಿಗಿದ್ದ ಚಿತ್ರಗಳನ್ನು ಸಿದ್ದರಾಮಯ್ಯ ಹಾಗೂ ಅವರ ಆಪ್ತರು ಮಾಧ್ಯಮಗಳಿಗೆ ಬಿಡುಗಡೆ ಮಾಡದಿರುವುದು ಗಮನಾರ್ಹ.</p>.<p>ರಾಹುಲ್ ಗಾಂಧಿ ಅವರಿಗೆ ತಮ್ಮ ಪುತ್ರ ಯತೀಂದ್ರ ಅವರನ್ನು ಪರಿಚಯಿಸಿದ ಸಿದ್ದರಾಮಯ್ಯ, ‘ಆತನ(ಯತೀಂದ್ರ) ಬಗ್ಗೆ ಕಾಳಜಿ ಇರಲಿ’ ಎಂದು ಮನವಿ ಮಾಡಿದ್ದಾಗಿ ಮೂಲಗಳು ಹೇಳಿವೆ.</p>.<p>‘ಸಿದ್ದರಾಮಯ್ಯ ಸಮಾಜವಾದ ಹಿನ್ನೆಲೆಯವರು. ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ಅವರು ತಮ್ಮ ಪುತ್ರನಿಗೆ ರಾಜಕೀಯ ನೆಲೆ ಕಲ್ಪಿಸಲು ಯತ್ನಿಸಿದರು ಎಂಬುದಾಗಿ ಅವರ ನಿಷ್ಠರಿಂದ ಟೀಕೆಗಳು ಕೇಳಿ ಬರುವುದನ್ನು ತಡೆಯುವ ಸಲುವಾಗಿ, ಯತೀಂದ್ರ–ರಾಹುಲ್ ಭೇಟಿಯ ಚಿತ್ರಗಳನ್ನು ಬಹಿರಂಗಪಡಿಸುವ ಗೋಜಿಗೆ ಹೋಗಿಲ್ಲ’ ಎಂದು ಈ ಬೆಳವಣಿಗೆಗಳ ಬಗ್ಗೆ ಮಾಹಿತಿ ಇರುವ ಪಕ್ಷದ ನಾಯಕರು ಹೇಳಿದ್ದಾರೆ.</p>.<p>‘ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕಾಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಪಕ್ಷದ ನಿರ್ದೇಶನಕ್ಕೆ ತಲೆಬಾಗಿ ತಾವು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾಗಿ ಪುನರುಚ್ಚರಿಸಿದರು ಎಂಬುದಾಗಿ ಹೇಳಿದರು’ ಎಂದು ಮೂಲಗಳು ಹೇಳಿವೆ.</p>.<p>ಪುತ್ರ ಯತೀಂದ್ರ ಹಾಗೂ ತಮ್ಮ ನಿಷ್ಠರಿಗೆ ಹೊಸದಾಗಿ ರಚನೆಯಾಗುವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು ಎಂದು ಮೂಲಗಳು ಹೇಳಿದರೆ, ‘ಯತೀಂದ್ರ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಇದೆ’ ಎಂದು ಪಕ್ಷದ ಕೆಲ ನಾಯಕರಲ್ಲಿ ಚರ್ಚೆ ನಡೆಯುತ್ತಿದೆ’ ಎಂದು ಹೇಳಲಾಗುತ್ತಿದೆ.</p>.<p><strong>ಖರ್ಗೆ ಭೇಟಿ:</strong> ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ, ಸಿದ್ದರಾಮಯ್ಯ ಹಾಗೂ ಯತೀಂದ್ರ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿ ಮಾಡಿದರು.</p>.<p>‘ಈ ಭೇಟಿಯಲ್ಲಿ ಕೂಡ, ತಮ್ಮ ಪುತ್ರನ ರಾಜಕೀಯ ಭವಿಷ್ಯ ಕುರಿತು ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಈ ಕುರಿತು ರಾಹುಲ್ ಗಾಂಧಿಯವರೇ ನಿರ್ಧರಿಸುತ್ತಾರೆ ಎಂಬುದಾಗಿ ಖರ್ಗೆ ಸ್ಪಷ್ಟಪಡಿಸಿದರು’ ಎಂದು ಮೂಲಗಳು ಹೇಳಿವೆ.</p>.<p><strong>ಜತೆಗೂಡದ ಶಿವಕುಮಾರ್:</strong> ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ದೆಹಲಿಯಲ್ಲಿಯೇ ಇದ್ದರೂ, ಅವರು ಪಕ್ಷದ ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ಅವರೊಂದಿಗೆ ತೆರಳಿರಲಿಲ್ಲ. ಅವರು ಉಳಿದುಕೊಂಡಿದ್ದ ಹೋಟೆಲ್ನಲ್ಲಿ ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು.</p>.<p>‘ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯವರ ಭೇಟಿ ಸೌಹಾರ್ದಯುತವಾಗಿತ್ತು. ಹಲವಾರು ವಿಷಯಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು’ ಎಂದು ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ದೆಹಲಿಗೆ ಶುಕ್ರವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ತಮ್ಮ ಪುತ್ರ ಯತೀಂದ್ರ ಅವರ ‘ರಾಜಕೀಯ ಪದೋನ್ನತಿ’ ಗಾಗಿ ಪಕ್ಷದ ಹೈಕಮಾಂಡ್ ಬೆಂಬಲ ಕೋರಿದರು.</p>.<p>10, ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಯತೀಂದ್ರ ಅವರೊಂದಿಗೆ ತೆರಳಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ತಮ್ಮ ಬೇಡಿಕೆ ಮುಂದಿಟ್ಟರು ಎಂದು ಮೂಲಗಳು ಹೇಳಿವೆ.</p>.<p>ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ವೇಳೆ, ಪಕ್ಷದ ಕರ್ನಾಟಕ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಜೆ.ಜಾರ್ಜ್ ಕೂಡ ಇದ್ದರು. ಸೋನಿಯಾ ಗಾಂಧಿ ಅವರು ಈ ವೇಳೆ ಇರಲಿಲ್ಲ ಎಂದು ಇವೇ ಮೂಲಗಳು ಹೇಳಿವೆ.</p>.<p>ಆದರೆ, ಯತೀಂದ್ರ ಅವರು ರಾಹುಲ್ ಗಾಂಧಿ ಅವರೊಂದಿಗಿದ್ದ ಚಿತ್ರಗಳನ್ನು ಸಿದ್ದರಾಮಯ್ಯ ಹಾಗೂ ಅವರ ಆಪ್ತರು ಮಾಧ್ಯಮಗಳಿಗೆ ಬಿಡುಗಡೆ ಮಾಡದಿರುವುದು ಗಮನಾರ್ಹ.</p>.<p>ರಾಹುಲ್ ಗಾಂಧಿ ಅವರಿಗೆ ತಮ್ಮ ಪುತ್ರ ಯತೀಂದ್ರ ಅವರನ್ನು ಪರಿಚಯಿಸಿದ ಸಿದ್ದರಾಮಯ್ಯ, ‘ಆತನ(ಯತೀಂದ್ರ) ಬಗ್ಗೆ ಕಾಳಜಿ ಇರಲಿ’ ಎಂದು ಮನವಿ ಮಾಡಿದ್ದಾಗಿ ಮೂಲಗಳು ಹೇಳಿವೆ.</p>.<p>‘ಸಿದ್ದರಾಮಯ್ಯ ಸಮಾಜವಾದ ಹಿನ್ನೆಲೆಯವರು. ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ಅವರು ತಮ್ಮ ಪುತ್ರನಿಗೆ ರಾಜಕೀಯ ನೆಲೆ ಕಲ್ಪಿಸಲು ಯತ್ನಿಸಿದರು ಎಂಬುದಾಗಿ ಅವರ ನಿಷ್ಠರಿಂದ ಟೀಕೆಗಳು ಕೇಳಿ ಬರುವುದನ್ನು ತಡೆಯುವ ಸಲುವಾಗಿ, ಯತೀಂದ್ರ–ರಾಹುಲ್ ಭೇಟಿಯ ಚಿತ್ರಗಳನ್ನು ಬಹಿರಂಗಪಡಿಸುವ ಗೋಜಿಗೆ ಹೋಗಿಲ್ಲ’ ಎಂದು ಈ ಬೆಳವಣಿಗೆಗಳ ಬಗ್ಗೆ ಮಾಹಿತಿ ಇರುವ ಪಕ್ಷದ ನಾಯಕರು ಹೇಳಿದ್ದಾರೆ.</p>.<p>‘ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕಾಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಪಕ್ಷದ ನಿರ್ದೇಶನಕ್ಕೆ ತಲೆಬಾಗಿ ತಾವು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾಗಿ ಪುನರುಚ್ಚರಿಸಿದರು ಎಂಬುದಾಗಿ ಹೇಳಿದರು’ ಎಂದು ಮೂಲಗಳು ಹೇಳಿವೆ.</p>.<p>ಪುತ್ರ ಯತೀಂದ್ರ ಹಾಗೂ ತಮ್ಮ ನಿಷ್ಠರಿಗೆ ಹೊಸದಾಗಿ ರಚನೆಯಾಗುವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು ಎಂದು ಮೂಲಗಳು ಹೇಳಿದರೆ, ‘ಯತೀಂದ್ರ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಇದೆ’ ಎಂದು ಪಕ್ಷದ ಕೆಲ ನಾಯಕರಲ್ಲಿ ಚರ್ಚೆ ನಡೆಯುತ್ತಿದೆ’ ಎಂದು ಹೇಳಲಾಗುತ್ತಿದೆ.</p>.<p><strong>ಖರ್ಗೆ ಭೇಟಿ:</strong> ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ, ಸಿದ್ದರಾಮಯ್ಯ ಹಾಗೂ ಯತೀಂದ್ರ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿ ಮಾಡಿದರು.</p>.<p>‘ಈ ಭೇಟಿಯಲ್ಲಿ ಕೂಡ, ತಮ್ಮ ಪುತ್ರನ ರಾಜಕೀಯ ಭವಿಷ್ಯ ಕುರಿತು ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಈ ಕುರಿತು ರಾಹುಲ್ ಗಾಂಧಿಯವರೇ ನಿರ್ಧರಿಸುತ್ತಾರೆ ಎಂಬುದಾಗಿ ಖರ್ಗೆ ಸ್ಪಷ್ಟಪಡಿಸಿದರು’ ಎಂದು ಮೂಲಗಳು ಹೇಳಿವೆ.</p>.<p><strong>ಜತೆಗೂಡದ ಶಿವಕುಮಾರ್:</strong> ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ದೆಹಲಿಯಲ್ಲಿಯೇ ಇದ್ದರೂ, ಅವರು ಪಕ್ಷದ ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ಅವರೊಂದಿಗೆ ತೆರಳಿರಲಿಲ್ಲ. ಅವರು ಉಳಿದುಕೊಂಡಿದ್ದ ಹೋಟೆಲ್ನಲ್ಲಿ ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು.</p>.<p>‘ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯವರ ಭೇಟಿ ಸೌಹಾರ್ದಯುತವಾಗಿತ್ತು. ಹಲವಾರು ವಿಷಯಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು’ ಎಂದು ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>