<p><strong>ಮೈಸೂರು:</strong> ‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೂ, ಮುಖ್ಯಮಂತ್ರಿ ಕುರ್ಚಿಗೂ ಸಂಬಂಧವಿಲ್ಲ. ಹೈಕಮಾಂಡ್ ಅನುಮತಿಸಿದರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.ಕೇಂದ್ರದ ಬಾಕಿ: ಸರ್ವ ಪಕ್ಷ ನಿಯೋಗ; ಮುಖ್ಯಮಂತ್ರಿ ಸಿದ್ದರಾಮಯ್ಯ.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್ ಸೂಚನೆ ಮೇರೆಗೆ ನಾವು ನಡೆಯುತ್ತೇವೆ. ’ ಎಂದರು.</p><p>‘ಅನುಮತಿ ಕೊಟ್ಟಾಗ ಬಜೆಟ್ ಮಂಡಿಸುತ್ತೇನೆ, ನೋಡೋಣ’ ಎಂದು ಪ್ರತಿಕ್ರಿಯಿಸಿದರು.</p><p>‘ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ನಾನು ಸೋಮವಾರದಿಂದ (ಮಾರ್ಚ್ 30) ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ. ಏ.5ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುತ್ತೇನೆ. ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ. ದಾವಣೆಗೆರೆಯಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಹೇಳಿದರು.</p><p>‘ಉಪ ಚುನಾವಣೆ ಫಲಿತಾಂಶವು ಜನರು ಸರ್ಕಾರಕ್ಕೆ ಮಾಡುವ ಆಶೀರ್ವಾದ ಆಗಲಿದೆ. ಯಾವುದೇ ಚುನಾವಣೆ ನಡೆದರೂ ನಾವೇ ಗೆಲ್ಲುತ್ತೇವೆ. 2028ರ ವಿಧಾನಸಭಾ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿ: ಅಹಿಂದ ಚಳವಳಿ ಆಗ್ರಹ.<p>‘ತಮಿಳುನಾಡು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು. </p><h2>ನಂಟೇನೇ ಇರಲಿ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ</h2><p>ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಡ್ರಗ್ಸ್ ಮುಕ್ತ ರಾಜ್ಯ ನಿರ್ಮಾಣ ನಮ್ಮ ಉದ್ದೇಶ’ ಎಂದು ಹೇಳಿದರು.</p><p>‘ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಹಚ್ಚಿರುವ ಬಗ್ಗೆ ಗೊತ್ತಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ನಂಟು ಎಲ್ಲಿಗಾದರೂ ಇರಲಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೂ, ಮುಖ್ಯಮಂತ್ರಿ ಕುರ್ಚಿಗೂ ಸಂಬಂಧವಿಲ್ಲ. ಹೈಕಮಾಂಡ್ ಅನುಮತಿಸಿದರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.ಕೇಂದ್ರದ ಬಾಕಿ: ಸರ್ವ ಪಕ್ಷ ನಿಯೋಗ; ಮುಖ್ಯಮಂತ್ರಿ ಸಿದ್ದರಾಮಯ್ಯ.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್ ಸೂಚನೆ ಮೇರೆಗೆ ನಾವು ನಡೆಯುತ್ತೇವೆ. ’ ಎಂದರು.</p><p>‘ಅನುಮತಿ ಕೊಟ್ಟಾಗ ಬಜೆಟ್ ಮಂಡಿಸುತ್ತೇನೆ, ನೋಡೋಣ’ ಎಂದು ಪ್ರತಿಕ್ರಿಯಿಸಿದರು.</p><p>‘ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ನಾನು ಸೋಮವಾರದಿಂದ (ಮಾರ್ಚ್ 30) ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ. ಏ.5ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುತ್ತೇನೆ. ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ. ದಾವಣೆಗೆರೆಯಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಹೇಳಿದರು.</p><p>‘ಉಪ ಚುನಾವಣೆ ಫಲಿತಾಂಶವು ಜನರು ಸರ್ಕಾರಕ್ಕೆ ಮಾಡುವ ಆಶೀರ್ವಾದ ಆಗಲಿದೆ. ಯಾವುದೇ ಚುನಾವಣೆ ನಡೆದರೂ ನಾವೇ ಗೆಲ್ಲುತ್ತೇವೆ. 2028ರ ವಿಧಾನಸಭಾ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿ: ಅಹಿಂದ ಚಳವಳಿ ಆಗ್ರಹ.<p>‘ತಮಿಳುನಾಡು ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು. </p><h2>ನಂಟೇನೇ ಇರಲಿ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ</h2><p>ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಡ್ರಗ್ಸ್ ಮುಕ್ತ ರಾಜ್ಯ ನಿರ್ಮಾಣ ನಮ್ಮ ಉದ್ದೇಶ’ ಎಂದು ಹೇಳಿದರು.</p><p>‘ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಹಚ್ಚಿರುವ ಬಗ್ಗೆ ಗೊತ್ತಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ನಂಟು ಎಲ್ಲಿಗಾದರೂ ಇರಲಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುತ್ತೇವೆ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>