<p><strong>ಬೆಂಗಳೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದ ರೀತಿಯಲ್ಲಿ ಹೊಸ ಹೊಸ ಜಾತಿಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ದೂರಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈವರೆಗೆ ಅಧಿಕೃತ ಜಾತಿ ಪಟ್ಟಿಯಲ್ಲಿ ಇಲ್ಲದ ಜಾತಿಗಳಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಜಾತಿ ಸಮೀಕ್ಷೆ ರದ್ದಾಗುವ ಸಾಧ್ಯತೆ ಹೆಚ್ಚು’ ಎಂದು ಹೇಳಿದರು.</p>.<p>‘ಹಿಂದೂಗಳಲ್ಲಿ ತಪ್ಪು ಇದೆ ಎಂದಿದ್ದಾರೆ. ಹಾಗಿದ್ದರೆ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ತಪ್ಪು– ತಾರತಮ್ಯಗಳು ಇಲ್ಲವೆ? ಅವುಗಳ ಕುರಿತೂ ಮಾತನಾಡಲಿ. ಇವರಿಗೆ ಹಿಂದೂಗಳ ಮತ ಮಾತ್ರ ಬೇಕು. ಗೆದ್ದ ನಂತರ ಹಿಂದೂಗಳನ್ನು ತುಳಿಯುವ ಕೆಲಸ ಮಾಡುತ್ತಾರೆ’ ಎಂದರು.</p>.<p>‘ದಸರಾ ಹಬ್ಬವನ್ನು ನಾಡ ಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಂ ಹಬ್ಬಗಳನ್ನು ಕೂಡ ನಾಡ ಹಬ್ಬ ಎಂದು ಮಾಡಲಿ. ಮುಸ್ಲಿಂ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ’ ಎಂದು ಅವರು ವ್ಯಂಗ್ಯವಾಡಿದರು.</p>.<p>ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದು ಎಂಬಂತೆ ನಿಯಮ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದಾಗಿಯೇ ಹಿಂದೂ–ಮುಸ್ಲಿಮರ ನಡುವೆ ಒಡಕು ಮೂಡಿದೆ ಎಂದು ಅಶೋಕ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದ ರೀತಿಯಲ್ಲಿ ಹೊಸ ಹೊಸ ಜಾತಿಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ದೂರಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈವರೆಗೆ ಅಧಿಕೃತ ಜಾತಿ ಪಟ್ಟಿಯಲ್ಲಿ ಇಲ್ಲದ ಜಾತಿಗಳಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಜಾತಿ ಸಮೀಕ್ಷೆ ರದ್ದಾಗುವ ಸಾಧ್ಯತೆ ಹೆಚ್ಚು’ ಎಂದು ಹೇಳಿದರು.</p>.<p>‘ಹಿಂದೂಗಳಲ್ಲಿ ತಪ್ಪು ಇದೆ ಎಂದಿದ್ದಾರೆ. ಹಾಗಿದ್ದರೆ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ತಪ್ಪು– ತಾರತಮ್ಯಗಳು ಇಲ್ಲವೆ? ಅವುಗಳ ಕುರಿತೂ ಮಾತನಾಡಲಿ. ಇವರಿಗೆ ಹಿಂದೂಗಳ ಮತ ಮಾತ್ರ ಬೇಕು. ಗೆದ್ದ ನಂತರ ಹಿಂದೂಗಳನ್ನು ತುಳಿಯುವ ಕೆಲಸ ಮಾಡುತ್ತಾರೆ’ ಎಂದರು.</p>.<p>‘ದಸರಾ ಹಬ್ಬವನ್ನು ನಾಡ ಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಂ ಹಬ್ಬಗಳನ್ನು ಕೂಡ ನಾಡ ಹಬ್ಬ ಎಂದು ಮಾಡಲಿ. ಮುಸ್ಲಿಂ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ’ ಎಂದು ಅವರು ವ್ಯಂಗ್ಯವಾಡಿದರು.</p>.<p>ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದು ಎಂಬಂತೆ ನಿಯಮ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದಾಗಿಯೇ ಹಿಂದೂ–ಮುಸ್ಲಿಮರ ನಡುವೆ ಒಡಕು ಮೂಡಿದೆ ಎಂದು ಅಶೋಕ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>