ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿಯರ್ ಲೀಡರ್‌ ಬೇಡ, ಕನ್ನಡಿಗರ ಪರ ದನಿ ಎತ್ತುವ ದೇವೇಗೌಡರು ಬೇಕು: ಸಿದ್ದರಾಮಯ್ಯ

Published : 16 ಫೆಬ್ರುವರಿ 2025, 6:27 IST
Last Updated : 16 ಫೆಬ್ರುವರಿ 2025, 6:27 IST
ಫಾಲೋ ಮಾಡಿ
Comments
‘ಅಧಿಕಾರದಲ್ಲಿದ್ದು ಹೋರಾಟ ಯಾಕೆ?’
‘ರಾಜ್ಯದ ನೆಲ ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು’ ಎಂದು ಎಚ್‌.ಡಿ. ದೇವೇಗೌಡರನ್ನು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್ ‘ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ದೇವೇಗೌಡರು ಹೇಳಿದ್ದರು. ಮಹದಾಯಿ ವಿಚಾರವಾಗಿ ನಾವು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ನೀರಾವರಿ ಯೋಜನೆಗಳ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ ನಮಗೆ ಅದರ ಅಗತ್ಯವಿಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು’ ಎಂದರು. ‘ಭದ್ರಾ ಮೇಲ್ದಂಡೆ ಯೋಜನೆಗೆ ₹ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ. ಅದನ್ನು ಕೊಟ್ಟಿಲ್ಲ ಎಂದು ‌ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು ಕುಮಾರಸ್ವಾಮಿ ಕೇಂದ್ರ ಸಚಿವರು ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT