<p><strong>ಬೆಂಗಳೂರು:</strong> ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/congress-lockdown-workers-law-apmc-kpcc-d-k-shivakumar-727084.html" itemprop="url">ಕಾರ್ಮಿಕ ಕಾನೂನು ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಹೋರಾಟ: ಡಿ.ಕೆ.ಶಿವಕುಮಾರ್</a></p>.<p>ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದೂ ಅವರು ಹೇಳಿದರು.</p>.<p>ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/congress-lockdown-workers-law-apmc-kpcc-d-k-shivakumar-727084.html" itemprop="url">ಕಾರ್ಮಿಕ ಕಾನೂನು ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಹೋರಾಟ: ಡಿ.ಕೆ.ಶಿವಕುಮಾರ್</a></p>.<p>ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದೂ ಅವರು ಹೇಳಿದರು.</p>.<p>ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>