ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ.
— Siddaramaiah (@siddaramaiah) February 22, 2022
ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? 5/11#LawAndOrder
ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಇತರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ಮಾಡಲಿ, ಅದಕ್ಕೆ ನಮ್ಮ ತಕರಾರಿಲ್ಲ.
— Siddaramaiah (@siddaramaiah) February 22, 2022
ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕಟ್ಟುನಿಟ್ಟಾಗಿ ತನಿಖೆ ನಡೆಯಬೇಕು. 6/11#LawAndOrder
ಕೊಲೆ ಪ್ರಕರಣದ ತನಿಖೆಯ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ. 7/11#LawAndOrder
— Siddaramaiah (@siddaramaiah) February 22, 2022
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ @JPNadda ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. 8/11#LawAndOrder
— Siddaramaiah (@siddaramaiah) February 22, 2022
ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. 9/11#LawAndOrder
— Siddaramaiah (@siddaramaiah) February 22, 2022
ಸಚಿವ ಈಶ್ವರಪ್ಪ ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. 10/11#LawAndOrder
— Siddaramaiah (@siddaramaiah) February 22, 2022
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.