ಕಳೆದ ವಾರವಷ್ಟೆ ಅರ್ಕಾವತಿ ಹಗರಣದ ಕೆಂಪಣ್ಣ ಆಯೋಗ ವರದಿ ಬಗ್ಗೆ ತನಿಖೆ ಮಾಡದೆ ಇರುವುದು ನಮ್ಮ ಸರ್ಕಾರದ ತಪ್ಪು ನಮ್ಮ ಪಕ್ಷದಲ್ಲೂ ಹೊಂದಾಣಿಕೆ ರಾಜಕಾರಣ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಹೊಂದಾಣಿಕೆ ರಾಜಕಾರಣ ಹೇಳಿಕೆಯ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.