<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದವರು. ಅವರು ಕೊಟ್ಟ ಭರವಸೆ ಈಡೇರಿಸಲಿ’ ಎಂದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಕುರ್ಚಿ ಸದ್ಯ ಖಾಲಿ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಯಾಗಿ ಇರುತ್ತಾರೆಂದು ಹೈಕಮಾಂಡ್ ಹೇಳಿದರೆ ಅದಕ್ಕೆ ನಾವೂ ಬದ್ಧ’ ಎಂದರು.</p>.<p>‘ಶಾಸಕರಾದ ಬಸವರಾಜ ರಾಯರಡ್ಡಿ, ಕೆ.ಎನ್. ರಾಜಣ್ಣ, ನಾನು ಯಾರೂ ಹೈಕಮಾಂಡ್ ಅಲ್ಲ. ಅವರ ಮಾತುಗಳನ್ನು ಪರಿಗಣಿಸುವ ಅಗತ್ಯವೂ ಇಲ್ಲ. ಹೈಕಮಾಂಡ್ ಮಾತಿಗೆ ನಾವೆಲ್ಲರೂ ಬದ್ಧ’ ಎಂದರು.</p>.<p>‘ನುಡಿದಂತೆ ನಡೆಯಬೇಕೆಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಮುಂದೆ ಏನಾದರೂ ಒಪ್ಪಂದ ಆಗಿದ್ದರೆ ಅವರು ಮಾತನಾಡಲಿ. ಒಪ್ಪಂದ ಆಗಿದ್ದರೆ ಹೈಕಮಾಂಡ್ ಹೇಳಬೇಕು’ ಎಂದರು.</p>.<p>‘ಪ್ರತಿಯೊಬ್ಬ ಶಾಸಕರಿಗೂ ಅವರದ್ದೇ ಆದ ಗೌರವವಿದೆ. ಒಬ್ಬರಿಗೆ ನೋಟಿಸ್ ಕೊಡುವುದು, ಮತ್ಯಾರಿಗೊ ಕೊಡದೇ ಇರುವುದು ಸರಿಯಲ್ಲ’ ಎಂದ ಅವರು, ‘ಸಂಕ್ರಾಂತಿ ಬಳಿಕ ನಾನು ಮಾತನಾಡುತ್ತೇನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದವರು. ಅವರು ಕೊಟ್ಟ ಭರವಸೆ ಈಡೇರಿಸಲಿ’ ಎಂದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಕುರ್ಚಿ ಸದ್ಯ ಖಾಲಿ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಯಾಗಿ ಇರುತ್ತಾರೆಂದು ಹೈಕಮಾಂಡ್ ಹೇಳಿದರೆ ಅದಕ್ಕೆ ನಾವೂ ಬದ್ಧ’ ಎಂದರು.</p>.<p>‘ಶಾಸಕರಾದ ಬಸವರಾಜ ರಾಯರಡ್ಡಿ, ಕೆ.ಎನ್. ರಾಜಣ್ಣ, ನಾನು ಯಾರೂ ಹೈಕಮಾಂಡ್ ಅಲ್ಲ. ಅವರ ಮಾತುಗಳನ್ನು ಪರಿಗಣಿಸುವ ಅಗತ್ಯವೂ ಇಲ್ಲ. ಹೈಕಮಾಂಡ್ ಮಾತಿಗೆ ನಾವೆಲ್ಲರೂ ಬದ್ಧ’ ಎಂದರು.</p>.<p>‘ನುಡಿದಂತೆ ನಡೆಯಬೇಕೆಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಮುಂದೆ ಏನಾದರೂ ಒಪ್ಪಂದ ಆಗಿದ್ದರೆ ಅವರು ಮಾತನಾಡಲಿ. ಒಪ್ಪಂದ ಆಗಿದ್ದರೆ ಹೈಕಮಾಂಡ್ ಹೇಳಬೇಕು’ ಎಂದರು.</p>.<p>‘ಪ್ರತಿಯೊಬ್ಬ ಶಾಸಕರಿಗೂ ಅವರದ್ದೇ ಆದ ಗೌರವವಿದೆ. ಒಬ್ಬರಿಗೆ ನೋಟಿಸ್ ಕೊಡುವುದು, ಮತ್ಯಾರಿಗೊ ಕೊಡದೇ ಇರುವುದು ಸರಿಯಲ್ಲ’ ಎಂದ ಅವರು, ‘ಸಂಕ್ರಾಂತಿ ಬಳಿಕ ನಾನು ಮಾತನಾಡುತ್ತೇನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>