<p><strong>ಬೆಂಗಳೂರು</strong>: 'ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಊಹಾಪೋಹ. ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ' ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.</p><p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ವೇಣುಗೋಪಾಲ, ಸಿಎಂ, ಡಿಸಿಎಂ ಸುದ್ದಿಗೋಷ್ಟಿಯಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆ ನಿಮ್ಮ ಮಾಧ್ಯಮಗಳಲ್ಲೇ ಬಂದಿದೆ. ಅವರು ಹೇಳಿದ್ದೇನು, ರಾಜ್ಯಸಭೆ , ಎಂಎಲ್ಸಿ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಎಂದು. ಬೇರೆಯದ್ದೆಲ್ಲಾ ಊಹಾಪೋಹ ಎಂದಿದ್ದಾರೆ. ನಿನ್ನೆ ಬೇರೆ ಯಾವುದೇ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ' ಎಂದರು.</p><p>'ನಾವು ಬೆಳಿಗ್ಗೆ, ರಾತ್ರಿ ಕೆ.ಜೆ. ಜಾರ್ಜ್ ಮನೆಯಲ್ಲಿ ಇದ್ದೆವು. ಒಳ್ಳೆಯ ಊಟ ಕೊಟ್ಟರು. ನಾವೆಲ್ಲ ಸಿದ್ದರಾಮಯ್ಯ ಜೊತೆಯೇ ಇದ್ದೆವು. ಒಟ್ಟಿಗೆ ದೆಹಲಿಗೆ ಹೋಗಿ ಬಂದಿದ್ದೇವೆ' ಎಂದರು.</p><p>'ವೇಣುಗೋಪಾಲ, ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಾರ್ವಜನಿಕ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯಸಭೆ ಚುನಾವಣೆ ಬಗ್ಗೆ ನಮ್ಮನ್ನು ಕರೆಸಿದ್ದಾರೆ ಅಂತ ಹೇಳಿದ್ದಾರೆ. ಬೇರೆ ಯಾವುದೇ ವಿಚಾರ ಚರ್ಚೆ ಆಗಿಲ್ಲ. ನಾವು ಸಿದ್ದರಾಮಯ್ಯ ಹೋದಾಗ ಜೊತೆಗೆ ಹೋಗಿದ್ದೇವೆ ಎಂದರು.</p><p>'ಬ್ರೆಕ್ ಫಾಸ್ಟ್ ನಂತರ ರಾಜೀನಾಮೆ ಕೊಡುವುದು ಊಹಾಪೋಹ' ಎಂದೂ ಹೇಳಿದರು.</p><p>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 'ಸಿದ್ದರಾಮಯ್ಯ ಅವರನ್ನು ಮುಂದುವರೆಸಿ ಎಂದು ಒತ್ತಾಯ ಯಾಕೆ ಮಾಡಲಿ? ನಾವೆಲ್ಲ ಸಿದ್ದರಾಮಯ್ಯ ಅವರ ಜೊತೆ ಇದ್ದೇವೆ ಅಷ್ಟೆ. ಬದಲಾವಣೆ ಮಾಡೋ ಆಗಿದ್ರೆ ಒತ್ತಾಯ ಮಾಡಬಹುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಊಹಾಪೋಹ. ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ' ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.</p><p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ವೇಣುಗೋಪಾಲ, ಸಿಎಂ, ಡಿಸಿಎಂ ಸುದ್ದಿಗೋಷ್ಟಿಯಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆ ನಿಮ್ಮ ಮಾಧ್ಯಮಗಳಲ್ಲೇ ಬಂದಿದೆ. ಅವರು ಹೇಳಿದ್ದೇನು, ರಾಜ್ಯಸಭೆ , ಎಂಎಲ್ಸಿ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಎಂದು. ಬೇರೆಯದ್ದೆಲ್ಲಾ ಊಹಾಪೋಹ ಎಂದಿದ್ದಾರೆ. ನಿನ್ನೆ ಬೇರೆ ಯಾವುದೇ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ' ಎಂದರು.</p><p>'ನಾವು ಬೆಳಿಗ್ಗೆ, ರಾತ್ರಿ ಕೆ.ಜೆ. ಜಾರ್ಜ್ ಮನೆಯಲ್ಲಿ ಇದ್ದೆವು. ಒಳ್ಳೆಯ ಊಟ ಕೊಟ್ಟರು. ನಾವೆಲ್ಲ ಸಿದ್ದರಾಮಯ್ಯ ಜೊತೆಯೇ ಇದ್ದೆವು. ಒಟ್ಟಿಗೆ ದೆಹಲಿಗೆ ಹೋಗಿ ಬಂದಿದ್ದೇವೆ' ಎಂದರು.</p><p>'ವೇಣುಗೋಪಾಲ, ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಾರ್ವಜನಿಕ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯಸಭೆ ಚುನಾವಣೆ ಬಗ್ಗೆ ನಮ್ಮನ್ನು ಕರೆಸಿದ್ದಾರೆ ಅಂತ ಹೇಳಿದ್ದಾರೆ. ಬೇರೆ ಯಾವುದೇ ವಿಚಾರ ಚರ್ಚೆ ಆಗಿಲ್ಲ. ನಾವು ಸಿದ್ದರಾಮಯ್ಯ ಹೋದಾಗ ಜೊತೆಗೆ ಹೋಗಿದ್ದೇವೆ ಎಂದರು.</p><p>'ಬ್ರೆಕ್ ಫಾಸ್ಟ್ ನಂತರ ರಾಜೀನಾಮೆ ಕೊಡುವುದು ಊಹಾಪೋಹ' ಎಂದೂ ಹೇಳಿದರು.</p><p>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 'ಸಿದ್ದರಾಮಯ್ಯ ಅವರನ್ನು ಮುಂದುವರೆಸಿ ಎಂದು ಒತ್ತಾಯ ಯಾಕೆ ಮಾಡಲಿ? ನಾವೆಲ್ಲ ಸಿದ್ದರಾಮಯ್ಯ ಅವರ ಜೊತೆ ಇದ್ದೇವೆ ಅಷ್ಟೆ. ಬದಲಾವಣೆ ಮಾಡೋ ಆಗಿದ್ರೆ ಒತ್ತಾಯ ಮಾಡಬಹುದು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>