<p><strong>ಬೆಂಗಳೂರು:</strong> ‘ಸಿದ್ದರಾಮಯ್ಯ, ವರಿಷ್ಠರು ಸೇರಿಕೊಂಡೇ ಮಾತುಕತೆ ನಡೆಸಿದ್ದೆವು’ ಎಂಬ ಶಿವಕುಮಾರ್ ಮಾತಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ ‘ಈ ಕುರಿತು ಅವರನ್ನೇ ಕೇಳಿ’ ಎಂದರು.</p><p>ಸುದ್ದಿಗಾರರ ಪ್ರಶ್ನೆಗಳಿಗೆ ತುಸು ಸಿಟ್ಟಾದ ಸಿದ್ದರಾಮಯ್ಯ, ‘ಎಷ್ಟು ಬಾರಿ ನೀವು ಈ ಪ್ರಶ್ನೆ ಕೇಳುತ್ತೀರಿ. ಈ ವಿಚಾರದಲ್ಲಿ ಹೈಕಮಾಂಡ್ ಮಾತೇ ಅಂತಿಮ ಎಂದು ಹೇಳಿದ್ದೇನೆ. ಹೈಕಮಾಂಡ್ ಏನು ಹೇಳುತ್ತದೆಯೇ ಹಾಗೆ ನಡೆದುಕೊಳ್ಳಲಾಗುವುದು’ ಎಂದು ಹೇಳಿದರು.</p><p>‘ದೆಹಲಿಗೆ ಬರುವಂತೆ ಈಗ ನನ್ನನ್ನು ಯಾರೂ ಕರೆದಿಲ್ಲ. ಅಧಿಕಾರ ಹಂಚಿಕೆ ವಿಷಯದ ಪ್ರಶ್ನೆಗೆ ಉತ್ತರ ಕೊಡುವುದಿಲ್ಲ. ನನಗೆ ಬಜೆಟ್ ಪೂರ್ವ ಸಿದ್ಧತಾ ಕೆಲಸಗಳಿವೆ. ಸದ್ಯಕ್ಕೆ ನಾನು ದೆಹಲಿಗೆ ಹೋಗುವುದಿಲ್ಲ. ವರಿಷ್ಠರು ಬಯಸಿದರೆ ಮಾತ್ರ ತೆರಳುವೆ’ ಎಂದು ಹೇಳಿದರು.</p><p><strong>ಬಜೆಟ್ ಸಿದ್ಧತಾ ಸಭೆಗೂ ಡಿಕೆಶಿ ಗೈರು: </strong></p><p><strong>‘ಅಸ್ಸಾಂನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿರುವ ಕಾರಣ ಬಜೆಟ್ ಸಿದ್ಧತಾ ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲವೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಿದ್ದರಾಮಯ್ಯ, ವರಿಷ್ಠರು ಸೇರಿಕೊಂಡೇ ಮಾತುಕತೆ ನಡೆಸಿದ್ದೆವು’ ಎಂಬ ಶಿವಕುಮಾರ್ ಮಾತಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ ‘ಈ ಕುರಿತು ಅವರನ್ನೇ ಕೇಳಿ’ ಎಂದರು.</p><p>ಸುದ್ದಿಗಾರರ ಪ್ರಶ್ನೆಗಳಿಗೆ ತುಸು ಸಿಟ್ಟಾದ ಸಿದ್ದರಾಮಯ್ಯ, ‘ಎಷ್ಟು ಬಾರಿ ನೀವು ಈ ಪ್ರಶ್ನೆ ಕೇಳುತ್ತೀರಿ. ಈ ವಿಚಾರದಲ್ಲಿ ಹೈಕಮಾಂಡ್ ಮಾತೇ ಅಂತಿಮ ಎಂದು ಹೇಳಿದ್ದೇನೆ. ಹೈಕಮಾಂಡ್ ಏನು ಹೇಳುತ್ತದೆಯೇ ಹಾಗೆ ನಡೆದುಕೊಳ್ಳಲಾಗುವುದು’ ಎಂದು ಹೇಳಿದರು.</p><p>‘ದೆಹಲಿಗೆ ಬರುವಂತೆ ಈಗ ನನ್ನನ್ನು ಯಾರೂ ಕರೆದಿಲ್ಲ. ಅಧಿಕಾರ ಹಂಚಿಕೆ ವಿಷಯದ ಪ್ರಶ್ನೆಗೆ ಉತ್ತರ ಕೊಡುವುದಿಲ್ಲ. ನನಗೆ ಬಜೆಟ್ ಪೂರ್ವ ಸಿದ್ಧತಾ ಕೆಲಸಗಳಿವೆ. ಸದ್ಯಕ್ಕೆ ನಾನು ದೆಹಲಿಗೆ ಹೋಗುವುದಿಲ್ಲ. ವರಿಷ್ಠರು ಬಯಸಿದರೆ ಮಾತ್ರ ತೆರಳುವೆ’ ಎಂದು ಹೇಳಿದರು.</p><p><strong>ಬಜೆಟ್ ಸಿದ್ಧತಾ ಸಭೆಗೂ ಡಿಕೆಶಿ ಗೈರು: </strong></p><p><strong>‘ಅಸ್ಸಾಂನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿರುವ ಕಾರಣ ಬಜೆಟ್ ಸಿದ್ಧತಾ ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲವೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>