<p><strong>ಬೆಂಗಳೂರು</strong>: ‘ಅನೇಕ ಜಾತಿ, ಧರ್ಮ, ಸಂಸ್ಕೃತಿ ಇರುವ ದೇಶ ನಮ್ಮದು. ಇಲ್ಲಿ ಪ್ರೀತಿ, ವಿಶ್ವಾಸ ಮತ್ತು ಸಹಿಷ್ಣುತೆ ಇದ್ದರೆ ಮಾತ್ರ ಮನುಷ್ಯತ್ವ ಇರಲು ಸಾಧ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ನಲ್ಲಿ ಸೋಮವಾರ ನಡೆದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ನಾವು ವಿವಿಧತೆಯಲ್ಲಿ ಏಕತೆಯನ್ನು ಕಂಡವರು. ನಮ್ಮ ಸರ್ಕಾರ ಈ ಬಗ್ಗೆ ಬಲವಾದ ನಂಬಿಕೆಯನ್ನು ಇಟ್ಟುಕೊಂಡಿದೆ. ಎಲ್ಲ ಧರ್ಮಗಳನ್ನೂ ಸಮಾನ ಗೌರವದಿಂದ ಕಾಣುವ ವ್ಯವಸ್ಥೆ ನಮ್ಮದಾಗಿದೆ. ಸರ್ಕಾರಕ್ಕೆ ಎಲ್ಲ ಧರ್ಮಗಳೂ ಒಂದೇ’ ಎಂದು ಹೇಳಿದರು.</p>.<p>‘ಜಾತಿ, ವರ್ಗ ಹೋಗಬೇಕು. ಸಮಾನತೆಯಿಂದ ಬಾಳಬೇಕು ಎಂದು ಅನೇಕ ಸಮಾಜ ಸುಧಾರಕರು ಶ್ರಮಿಸಿದ್ದರು. ಎಲ್ಲ ಧರ್ಮಗಳ ಮೂಲವೇ ದಯೆಯಾಗಿದ್ದು, ಇದನ್ನೇ 12ನೇ ಶತಮಾನದಲ್ಲಿ ಬಸವಣ್ಣ ಹೇಳಿದ್ದರು. ಅದಕ್ಕಿಂತ ಮೊದಲು ಬುದ್ಧ, ಯೇಸುಕ್ರಿಸ್ತರು ಹೇಳಿದ್ದರು. ಆ ನಂತರ ಗಾಂಧೀಜಿ, ಅಂಬೇಡ್ಕರ್ ಕೂಡ ಅದನ್ನೇ ಹೇಳಿದ್ದು, ನಮ್ಮ ಸಂವಿಧಾನದ ಆಶಯವೂ ಅದೇ ಆಗಿದೆ’ ಎಂದು ಹೇಳಿದರು.</p>.<p>‘ನಾವು ಬೇರೆ ಧರ್ಮದವರನ್ನು ಪ್ರೀತಿಸಬೇಕು. ದ್ವೇಷಿಸುವ ಕೆಲಸವನ್ನು ಮಾಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ಎಲ್ಲ ಧರ್ಮದವರು ಸ್ವೀಕರಿಸಬೇಕು. ಆಗ ಎಲ್ಲರೂ ಸಮಾನ ಗೌರವದಿಂದ ಬದುಕಲು ಸಾಧ್ಯ’ ಎಂದರು.</p>.<p>‘ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದೇವೆ. ಈ ಬಾರಿ ₹ 250 ಕೋಟಿ ಮೀಸಲಿಟ್ಟಿದ್ದೇವೆ. ಆರ್ಥಿಕವಾಗಿ ಬಡವರಾಗಿರುವವರನ್ನು ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ. ಇದೇ ರೀತಿ ಎಲ್ಲ ಧರ್ಮ, ಜಾತಿಗಳ ಬಡವರನ್ನು ಮೇಲೆತ್ತುವ ಯೋಜನೆಗಳನ್ನು ರೂಪಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ’ ಎಂದು ವಿವರಿಸಿದರು.</p>.<p>ಬೆಂಗಳೂರು ಧರ್ಮಕ್ಷೇತ್ರದ ಆರ್ಚ್ ಬಿಷಪ್ ಪೀಟರ್ ಮಚಾಡೊ ಸಾನ್ನಿಧ್ಯ ವಹಿಸಿದ್ದರು. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿವಿಧ ಧರ್ಮಗುರುಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅನೇಕ ಜಾತಿ, ಧರ್ಮ, ಸಂಸ್ಕೃತಿ ಇರುವ ದೇಶ ನಮ್ಮದು. ಇಲ್ಲಿ ಪ್ರೀತಿ, ವಿಶ್ವಾಸ ಮತ್ತು ಸಹಿಷ್ಣುತೆ ಇದ್ದರೆ ಮಾತ್ರ ಮನುಷ್ಯತ್ವ ಇರಲು ಸಾಧ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ನಲ್ಲಿ ಸೋಮವಾರ ನಡೆದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ನಾವು ವಿವಿಧತೆಯಲ್ಲಿ ಏಕತೆಯನ್ನು ಕಂಡವರು. ನಮ್ಮ ಸರ್ಕಾರ ಈ ಬಗ್ಗೆ ಬಲವಾದ ನಂಬಿಕೆಯನ್ನು ಇಟ್ಟುಕೊಂಡಿದೆ. ಎಲ್ಲ ಧರ್ಮಗಳನ್ನೂ ಸಮಾನ ಗೌರವದಿಂದ ಕಾಣುವ ವ್ಯವಸ್ಥೆ ನಮ್ಮದಾಗಿದೆ. ಸರ್ಕಾರಕ್ಕೆ ಎಲ್ಲ ಧರ್ಮಗಳೂ ಒಂದೇ’ ಎಂದು ಹೇಳಿದರು.</p>.<p>‘ಜಾತಿ, ವರ್ಗ ಹೋಗಬೇಕು. ಸಮಾನತೆಯಿಂದ ಬಾಳಬೇಕು ಎಂದು ಅನೇಕ ಸಮಾಜ ಸುಧಾರಕರು ಶ್ರಮಿಸಿದ್ದರು. ಎಲ್ಲ ಧರ್ಮಗಳ ಮೂಲವೇ ದಯೆಯಾಗಿದ್ದು, ಇದನ್ನೇ 12ನೇ ಶತಮಾನದಲ್ಲಿ ಬಸವಣ್ಣ ಹೇಳಿದ್ದರು. ಅದಕ್ಕಿಂತ ಮೊದಲು ಬುದ್ಧ, ಯೇಸುಕ್ರಿಸ್ತರು ಹೇಳಿದ್ದರು. ಆ ನಂತರ ಗಾಂಧೀಜಿ, ಅಂಬೇಡ್ಕರ್ ಕೂಡ ಅದನ್ನೇ ಹೇಳಿದ್ದು, ನಮ್ಮ ಸಂವಿಧಾನದ ಆಶಯವೂ ಅದೇ ಆಗಿದೆ’ ಎಂದು ಹೇಳಿದರು.</p>.<p>‘ನಾವು ಬೇರೆ ಧರ್ಮದವರನ್ನು ಪ್ರೀತಿಸಬೇಕು. ದ್ವೇಷಿಸುವ ಕೆಲಸವನ್ನು ಮಾಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ಎಲ್ಲ ಧರ್ಮದವರು ಸ್ವೀಕರಿಸಬೇಕು. ಆಗ ಎಲ್ಲರೂ ಸಮಾನ ಗೌರವದಿಂದ ಬದುಕಲು ಸಾಧ್ಯ’ ಎಂದರು.</p>.<p>‘ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದೇವೆ. ಈ ಬಾರಿ ₹ 250 ಕೋಟಿ ಮೀಸಲಿಟ್ಟಿದ್ದೇವೆ. ಆರ್ಥಿಕವಾಗಿ ಬಡವರಾಗಿರುವವರನ್ನು ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ. ಇದೇ ರೀತಿ ಎಲ್ಲ ಧರ್ಮ, ಜಾತಿಗಳ ಬಡವರನ್ನು ಮೇಲೆತ್ತುವ ಯೋಜನೆಗಳನ್ನು ರೂಪಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ’ ಎಂದು ವಿವರಿಸಿದರು.</p>.<p>ಬೆಂಗಳೂರು ಧರ್ಮಕ್ಷೇತ್ರದ ಆರ್ಚ್ ಬಿಷಪ್ ಪೀಟರ್ ಮಚಾಡೊ ಸಾನ್ನಿಧ್ಯ ವಹಿಸಿದ್ದರು. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿವಿಧ ಧರ್ಮಗುರುಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>